ಉತ್ತರ ಪ್ರದೇಶ:ಎರಡು ವರ್ಷಗಳಿಂದ ಪ್ರೀತಿಸಿ, ಇನ್ನೇನು ಮದುಗೆ ಆಗೇ ಬಿಟ್ಟಿತು ಎನ್ನುವಷ್ಟರಲ್ಲಿ ವರ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಮದುವೆ ಹೆಣ್ಣು ಬರೋಬ್ಬರಿ 20 ಕಿ.ಮೀ ದೂರ ಚೇಸ್ ಮಾಡಿ ವರನನ್ನು ಮಂಟಪಕ್ಕೆ ಮರಳಿ ಕರೆತರುವಲ್ಲಿ ಯಶಸ್ವಿಯಾಗಿದ್ದಾಳೆ. ಬಾರಾಬಂಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬರ್ದಾರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:ಕಬ್ಬನ್ ಪಾರ್ಕ್​ಗೆ ಹೋಗುವವರೇ ಹುಷಾರ್! ಇಲ್ಲಿದೆ ಕಾರಣ…
ವಧು-ವರರಿಬ್ಬರು ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಬಳಿಕ ಮನೆಯವರಿಗೆ ತಿಳಿಸಿ, ಸಾಕಷ್ಟು ಮಾತಕಥೆಗಳ ನಂತರ ವಿವಾಹವಾಗಲು ನಿರ್ಧರಿಸಿದ್ದರು. ಅದರಂತೆ ಕಳೆದ ಭಾನುವಾರ ಭೂತೇಶ್ವರನಾಥ ದೇವಾಲಯದಲ್ಲಿ ವಿವಾಹ ಕಾರ್ಯಕ್ರಮ ನಡೆಸಲು ತೀರ್ಮಾನವಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಆಗಿದ್ದೇ ಬೇರೆ. ಅಲ್ಲಿಗೆ ಬಂದಿದ್ದವರಿಗೆ ಯಾವುದೇ ಸಿನಿಮಾದ ಸನ್ನಿವೇಶ ನಡೆದಂತೆ ಭಾಸವಾಗಿದೆ!
ಸಂಬಂಧಿಕರೆಲ್ಲರೂ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಯುವತಿ ಮದುಮಗಳಂತೆ ಅಲಂಕರಿಸಿಕೊಂಡು ತಾಳಿ ಕಟ್ಟಿಸಿಕೊಳ್ಳಲು ತಯಾರಾಗಿದ್ದಳು. ಆದರೆ ಎಷ್ಟು ಹೊತ್ತು ಕಾದರೂ ವರ ಮಾತ್ರ ಮಂಟಪಕ್ಕೆ ಬರಲೇ ಇಲ್ಲ. ಇದು ಅಲ್ಲಿದ್ದ ಎಲ್ಲರ ಗೊಂದಲಕ್ಕೆ ಕಾರಣವಾಗಿದೆ. ಈ ವೇಳೆ ವರ ಮೆಸೇಜ್ ಮಾಡಿ ತನ್ನ ತಾಯಿಯನ್ನು ಕರೆದುಕೊಂಡು ಬರಲು ಬದೌನ್​ಗೆ ಹೋಗುತ್ತಿದ್ದೇನೆ, ಕ್ಷಮಿಸಿ ಎಂದು ಹೇಳಿದ್ದಾನೆ. ಸಂದೇಶ ಓದಿದ ಯುವತಿಗೆ ವರ ಸುಳ್ಳು ಹೇಳುತ್ತಿದ್ದು, ಮದುವೆಯಾಗದೆ ಓಡಿ ಹೋಗುತ್ತಿದ್ದಾನೆ ಎಂಬ ಅನುಮಾನ ಮೂಡಿದೆ.
ಇದನ್ನೂ ಓದಿ:VIDEO | ಚಲಿಸುವ ಕಾರಿನ ಮೇಲೆ ಕುಳಿತು ಯುವತಿಯ ಫೋಟೋಶೂಟ್; ದಂಡ ವಿಧಿಸಿದ ಪೊಲೀಸರು
ತನ್ನ ಅನುಮಾನ ಬಲವಾಗುತ್ತಿದ್ದಂತೆ ಸ್ವಲ್ಪವೂ ತಡಮಾಡದ ವಧು, ರಾಯ್ ಬರೇಲಿಯಿಂದ ಸುಮಾರು 20 ದೂರದ ಭೀಮೋರಾ ಎಂಬಲ್ಲಿಗೆ ಹೋಗಿ ಹುಡುಕಾಡಿದ್ದಾಳೆ. ಈ ವೇಳೆ ಪೊಲೀಸ್ ಠಾಣೆ ಬಳಿ ಮದುವೆ ಗಂಡು ಬಸ್ ಹತ್ತುವಾಗ ಆತನನ್ನು ಹಿಂಬಾಲಿಸಿ ಹಿಡಿದು, ಮತ್ತೆ ಮದುವೆ ಮಂಟಪಕ್ಕೆ ಕರೆ ತಂದು ವಿವಾಹವಾಗಿದ್ದಾಳೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
