ನವದೆಹಲಿ: ಅಗಸ್ಟಾವೆಸ್ಟ್​ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಡೀಲ್​ನ 3,600 ಕೋಟಿ ರೂಪಾಯಿ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ರಕ್ಷಣಾ ಕಾರ್ಯದರ್ಶಿ ಶಶಿಕಾಂತ ಶರ್ಮಾ ಅವರನ್ನು ವಿಚಾರಣೆಗೆ ಒಳಪಡಿಸುವುದಕ್ಕೆ ಸಿಬಿಐ ಅನುಮತಿ ಕೋರಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಸಿಬಿಐ ಶೀಘ್ರವೇ ಪೂರಕ ಚಾರ್ಜ್​ ಶೀಟ್ ಸಲ್ಲಿಸುವುದಕ್ಕೆ ಸಿದ್ಧತೆಮಾಡಿಕೊಂಡಿದೆ. ಅದರಲ್ಲಿ ಕ್ರಿಶ್ಚಿಯನ್ ಮೈಕೆಲ್​ ಪಾತ್ರದ ವಿವರಣೆ ಇರಲಿದೆ. ಆತನನ್ನು ಯುಎಇನಿಂದ ಗಡಿಪಾರು ಮಾಡಿಸಿಕೊಂಡು ಭಾರತಕ್ಕೆ ಕರೆತರಲಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಇದನ್ನೂ ಓದಿ:ಗಾಂಜಾ ವ್ಯಸನಿಗಳ ಚಳಿ ಬಿಡಿಸಿದ ಪೊಲೀಸರು, ಉಡುಪಿಯಲ್ಲಿ 10 ಮಂದಿ ವಶಕ್ಕೆ
ಈ ಸಂಬಂಧ ಸುದ್ದಿಸಂಸ್ಥೆಗೆ ಪತ್ರಿಕ್ರಿಯೆ ನೀಡಿರುವ ಶರ್ಮಾ, ತಾನು ಇತ್ತೀಚೆಗಷ್ಟೇ ಹೃದಯದ ಸರ್ಜರಿಗೆ ಒಳಗಾಗಿದ್ದು, ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿಯಲ್ಲಿದ್ದೇನೆ. ತನ್ನ 4 ದಶಕಗಳ ಸೇವಾವಧಿಯಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಈಗಲೂ ತನ್ನ ಎಲ್ಲ ಕೆಲಸಗಳ ಹೊಣೆಗಾರಿಕೆ ತನ್ನದೇ ಆಗಿದ್ದು, ತಪ್ಪುಗಳಾಗಿಲ್ಲ. ಆರೋಪಗಳೆಲ್ಲವೂ ನಿರಾಧಾರ ಎಂದಿದ್ದಾರೆ.
ಇದನ್ನೂ ಓದಿ:ಕೋವಿಡ್ 19 ರೋಗಿಗಳಿಗೆ ಆ್ಯಂಬುಲೆನ್ಸ್ ಶುಲ್ಕ ನಿಗದಿ ಮಾಡಿ- ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ
ಶಶಿಕಾಂತ ಶರ್ಮಾ 2011ರಿಂದ 2013ರ ನಡುವೆ ರಕ್ಷಣಾ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ತರುವಾಯ ಸಿಎಜಿ ಆಗಿ ನೇಮಕಗೊಂಡಿದ್ದರು. (ಏಜೆನ್ಸೀಸ್)
14 ರಾಜ್ಯಗಳಿಗೆ ಆದಾಯ ಕೊರತೆ ಅನುದಾನ ಬಿಡುಗಡೆ ಮಾಡಿದ ಕೇಂದ್ರ: ಕರ್ನಾಟಕ ಪಟ್ಟಿಯಲ್ಲಿದೆಯೇ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
