ನವದೆಹಲಿ:ಮಿಸ್ ಇಂಡಿಯಾ ವಿಜೇತರ ಪಟ್ಟಿಯಲ್ಲಿ ದಲಿತ, ಬುಡಕಟ್ಟು ಅಥವಾ ಒಬಿಸಿ ಸಮುದಾಯದ ಮಹಿಳೆ ಇಲ್ಲ ಎಂದು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಅಲ್ಪಸಂಖ್ಯಾತ ವ್ಯವಹಾರಗಳ ಕೇಂದ್ರ ಸಚಿವ ಕಿರಣ್ ರಿಜಿಜು ರಾಹುಲ್​​ಗಾಂಧಿ ಅವರನ್ನು ಭಾನುವಾರ(ಆಗಸ್ಟ್​​​​ 25) ಟೀಕಿಸಿದ್ದಾರೆ.
ಇದನ್ನು ಓದಿ:2026ರ ವೇಳೆಗೆ ನಕ್ಸಲ್​ ಹಿಂಸಾಚಾರದಿಂದ ಮುಕ್ತವಾಗಲಿದೆ ಭಾರತ; ಅಮಿತ್​​ ಷಾ
ಈಗ ರಾಹುಲ್ ಗಾಂಧಿ ಅವರು ಮಿಸ್​​ ಇಂಡಿಯಾ ಸ್ಪರ್ಧೆಗಳು, ಚಲನಚಿತ್ರಗಳು, ಕ್ರೀಡೆಗಳಲ್ಲಿಯೂ ಮೀಸಲಾತಿ ಬಯಸಿದ್ದಾರೆ! ಇದು ಮಕ್ಕಳ ಬುದ್ಧಿಯ ವಿಷಯವಲ್ಲ ಜತೆಗೆ ಅವರನ್ನು ಪ್ರೋತ್ಸಾಹಿಸುವವರದ್ದೂ ಅಷ್ಟೇ ಜವಾಬ್ದಾರರಾಗಿರುತ್ತಾರೆ ಎಂದು ಹೇಳಿದ್ದಾರೆ. ರಾಷ್ಟ್ರವ್ಯಾಪಿ ಜಾತಿಗಣತಿಗೆ ಸಂಬಂಧಿಸಿದಂತೆ ರಾಹುಲ್​ಗಾಂಧಿ ಅವರು ತಮ್ಮ ಹೊಸ ಟೀಕೆಗಳೊಂದಿಗೆ ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಅಲ್ಲದೆ ರಾಹುಲ್​​​ ಗಾಂಧಿ ಅವರೇ ನಮ್ಮ ದೇಶವನ್ನು ವಿಭಜಿಸಲು ಸಾಧ್ಯವಿಲ್ಲ. ಐಎಎಸ್, ಐಪಿಎಸ್, ಐಎಫ್‌ಎಸ್, ಎಲ್ಲಾ ಉನ್ನತ ಸೇವೆಗಳ ನೇಮಕಾತಿಯಲ್ಲಿ ಮೀಸಲಾತಿಯನ್ನು ಬದಲಾಯಿಸಲು ಸುಪ್ರೀಂಕೋರ್ಟ್‌ಗೆ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರಗಳು ಮಿಸ್ ಇಂಡಿಯಾ ಅಭ್ಯರ್ಥಿಗಳನ್ನು, ಒಲಿಂಪಿಕ್ಸ್‌ಗೆ ಕ್ರೀಡಾಪಟುಗಳನ್ನು ಅಥವಾ ಚಲನಚಿತ್ರಗಳಿಗೆ ನಟರನ್ನು ಆಯ್ಕೆ ಮಾಡುವುದಿಲ್ಲ ಎಂದು ಅವರು ಹೇಳಿದರು.
Now, He wants reservations in Miss India competitions, Films, sports! It is not only issue of "Bal Budhi", but people who cheer him are – equally responsible too!बाल बुद्धि मनोरंजन के लिए अच्छी हो सकती है पर अपनी विभाजनकारी चालों में, हमारे पिछड़े समुदायों का मजाक न उड़ाएं।pic.twitter.com/9Vm7ITwMJX
ಮಿಸ್ ಇಂಡಿಯಾ ಸೌಂದರ್ಯ ಸ್ಪರ್ಧೆಯ ಪಟ್ಟಿಯಲ್ಲಿ ದಲಿತ, ಬುಡಕಟ್ಟು ಅಥವಾ ಇತರ ಹಿಂದುಳಿದ ವರ್ಗಗಳ ಸಮುದಾಯಗಳ ಮಹಿಳೆಯರಿಗೆ ಪ್ರಾತಿನಿಧ್ಯದ ಕೊರತೆಯ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪ್ರಶ್ನಿಸಿದ್ದರು. (ಏಜೆನ್ಸೀಸ್​​)
ಭಾರತಕ್ಕೆ ನುಸುಳುತ್ತಿರುವವರು ಹಿಂದುಗಳಲ್ಲ.. ಮುಸ್ಲಿಮರು; ಅಸ್ಸಾಂ ಸಿಎಂ ಕೊಟ್ಟ ಕಾರಣ ಇದು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
