ನವದೆಹಲಿ:ಕರೊನಾ ಮೊದಲನೇ ಅಲೆ, ಎರಡನೇ ಅಲೆ ಆಯಿತು.. ಇನ್ನೇನು ಮೂರನೇ ಅಲೆ ಬಂದೇ ಬಿಡುತ್ತದೆ ಎನ್ನುತ್ತಿರುವಾಗ ಅದನ್ನು ತಡೆಯಬಹುದು ಎಂಬ ವಿಷಯವನ್ನು ಹೇಳಿದ್ದಾರೆ ಪರಿಣತರು. ಹಾಗಾದರೆ ಕರೊನಾ ಮೂರನೇ ಅಲೆಯನ್ನು ತಡೆಯಲು ಏನು ಮಾಡಬೇಕು ಎಂಬ ಕುರಿತು ಅವರು ಹೇಳಿರುವ ಅಂಶಗಳ ಕುರಿತ ಮಾಹಿತಿ ಇಲ್ಲಿದೆ.
ಏನೇ ಮಾಡಿದರೂ ಮುಂದಿನ ಆರರಿಂದ ಎಂಟು ವಾರಗಳಲ್ಲಿ ಕರೊನಾ ಮೂರನೇ ಅಲೆ ಭಾರತವನ್ನು ಪ್ರವೇಶಿಸುವುದು ಖಚಿತ ಎಂದು ಎಐಐಎಂಎಸ್​ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಈಗಾಗಲೇ ಮುನ್ನೆಚ್ಚರಿಕೆ ನೀಡಿದ್ದರ ಬೆನ್ನಿಗೇ ಇಂಥದ್ದೊಂದು ವಿಷಯ ಹೊರಬಿದ್ದಿರುವುದರಿಂದ ಜನರ ಆತಂಕ ಸ್ವಲ್ಪಮಟ್ಟಿಗೆ ಕಡಿಮೆಯಾದರೂ ಆದೀತು.
ಇದನ್ನೂ ಓದಿ:ಭಾರತದಲ್ಲಿ ಇಂದು ಒಂದು ಸೆಕೆಂಡ್​ನಲ್ಲಿ ಹಾಕಿಸಿದ ಲಸಿಕೆ ಎಷ್ಟು ಗೊತ್ತೇ!?
ಕರೊನಾ ಮೂರನೇ ಅಲೆ ಪ್ರವೇಶಿಸಲಿದೆ ಎಂಬ ಮಾತುಕತೆ ಎಲ್ಲೆಡೆ ನಡೆಯುತ್ತಿರುವ ನಡುವೆ ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್ ಹೇಳಿರುವ ವಿಚಾರವೊಂದು ಜನರಿಗೆ ಸ್ವಲ್ಪ ಸಮಾಧಾನ ನೀಡುವಂತಿದೆ. ಆದರೆ ಕರೊನಾ ಮೂರನೇ ಅಲೆಯನ್ನು ತಡೆಯುವುದು ಜನರ ಕೈಯಲ್ಲೇ ಇದೆ ಎಂಬುದನ್ನೂ ಅವರು ಒತ್ತಿ ಹೇಳಿದ್ದಾರೆ.
ಇದನ್ನೂ ಓದಿ:ಆತ್ಮಹತ್ಯೆ ಮಾಡಿಕೊಳ್ಳುವವರಲ್ಲಿ ಪುರುಷರೇ ಹೆಚ್ಚು, ಏಕೆ?; ಗೃಹಿಣಿಯರಿಗೆ ಖುಷಿ ಕೊಟ್ಟೀತು ಈ ಅಧ್ಯಯನ ವರದಿ!
ಕರೊನಾ ಎರಡನೆ ಅಲೆಯೇ ಪ್ರವೇಶ ಮಾಡಿರದಂಥ ದೇಶಗಳೂ ಬಹಳಷ್ಟಿವೆ. ಹೀಗಿರುವಾಗ ನಾವು ಮೂರನೇ ಅಲೆಯನ್ನು ತಡೆಯುವುದು ಕಷ್ಟವೇನಲ್ಲ. ಎಲ್ಲರೂ ಲಸಿಕೆ ಹಾಕಿಸಿಕೊಂಡರೆ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸಿದರೆ ಕರೊನಾ ಮೂರನೇ ಅಲೆ ಬರಲು ಹೇಗೆ ಸಾಧ್ಯ? ಎಂಬುದಾಗಿ ಪ್ರಶ್ನಿಸಿರುವ ಅವರು, ಈ ಮೂಲಕ ಕರೊನಾ ಮೂರನೇ ಅಲೆಯನ್ನು ತಡೆಯಬಹುದು ಎಂಬ ಅಂಶವನ್ನು ಬಹಿರಂಗಪಡಿಸಿದ್ದಾರೆ. (ಏಜೆನ್ಸೀಸ್)
ನಾಪತ್ತೆಯಾದ ಹದಿನಾಲ್ಕರ ಹುಡುಗಿ 2 ವರ್ಷಗಳ ಬಳಿಕ 4 ತಿಂಗಳ ಮಗುವಿನೊಂದಿಗೆ ಪತ್ತೆಯಾದಳು!

ಕೆಎಸ್​ಆರ್​ಟಿಸಿ ಬಸ್​ನಲ್ಲಿ ಹಾವು!; ಲಾಕ್​ಡೌನ್​ ಇಫೆಕ್ಟ್​, ಚಾಲಕರಲ್ಲಿ ಭಯ…

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:nine + seventeen =
Remember me
