ನವದೆಹಲಿ:ಕಾನೂನಿನ ನೇಣು ಕುಣಿಕೆಯಿಂದ ಪಾರಾಗಲು ಅಪರಾಧಿಗಳು ಏನೇ ತಂತ್ರಗಳನ್ನು ಹೂಡಿದರೂ ಸಹ ನಿರ್ಭಯಾಳ ಅಮಾನವೀಯ ಸಾವಿನ ಪಾಪದಿಂದ ಅತ್ಯಾಚಾರಿಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಈ ದಿನ ನೆನಪಿಸಿದೆ.
ಇಂದು ಬೆಳ್ಳಂಬೆಳಗ್ಗೆಯಷ್ಟೇ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಅಪರಾಧಿಗಳನ್ನು ತಿಹಾರ್​ ಜೈಲಿನಲ್ಲಿ ಗಲ್ಲಿಗೇರಿಸಲಾಗಿದೆ. ತಡವಾದರೂ ಸರಿಯೇ, ಆದರೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂಬುದನ್ನು ನಮ್ಮ ಕಾನೂನು ವ್ಯವಸ್ಥೆ ತೋರಿಸಿಕೊಟ್ಟಿದೆ. ಸುದೀರ್ಘ 7 ವರ್ಷ ಕಾಯ್ದಿದ್ದ ನಿರ್ಭಯಾ ಪಾಲಕರಿಗೆ ಕೊನೆಗೂ ನ್ಯಾಯ ಸಿಕ್ಕಿದ್ದು, ಸಂತ್ರಸ್ತೆ ನಿರ್ಭಯಾ ಸಾವಿಗೂ ನ್ಯಾಯ ದೊರಕಿದೆ.
ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ನಿರ್ಭಯಾ ತಾಯಿ ಆಶಾ ದೇವಿ, ನಾನು ಕಾನೂನು ಹೋರಾಟ ಮುಂದುವರಿಸುತ್ತೇವೆ. ಭವಿಷ್ಯದಲ್ಲಿ ಇಂತಹ ಪ್ರಕರಣಗಳಲ್ಲಿ ಅಪರಾಧಿಗಳು ಯಾವುದೇ ತಂತ್ರಗಳನ್ನು ಹೂಡಿ ಶಿಕ್ಷೆಯನ್ನು ವಿಳಂಬ ಮಾಡದಂತೆ ಮಾರ್ಗಸೂಚಿ ಹೊರಡಿಸುವಂತೆ ಸುಪ್ರೀಂಕೋರ್ಟ್​ನಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಅಪರಾಧಿಗಳಾದ ಮುಕೇಶ್​ ಕುಮಾರ್​ ಸಿಂಗ್​, ಪವನ್​ ಕುಮಾರ್​ ಗುಪ್ತ, ವಿನಯ್​ ಕುಮಾರ್​ ಶರ್ಮ ಮತ್ತು ಅಕ್ಷಯ್​ ಕುಮಾರ್​ ಸಿಂಗ್​ರನ್ನು ಇಂದು ಬೆಳಗ್ಗೆ ತಿಹಾರ್​ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು.
23 ವರ್ಷದ ಪ್ಯಾರಾಮೆಡಿಕಲ್​ ವಿದ್ಯಾರ್ಥಿನಿಯನ್ನು ಡಿಸೆಂಬರ್​ 16, 2012ರಂದು ಬಾಲಾಪಾರಾಧಿ ಸೇರಿದಂತೆ ಒಟ್ಟು ಆರು ಮಂದಿ ಮೃಗೀಯವಾಗಿ ಅತ್ಯಾಚಾರವೆಸಗಿ, ಕೊಲೆಗೈದು ವಿಕೃತಿ ಮೆರೆದಿದ್ದರು.
ಒಟ್ಟು ಆರು ಅಪರಾಧಿಗಳಲ್ಲಿ ರಾಮ ಸಿಂಗ್​ ತಿಹಾರ್​ ಜೈಲಿನಲ್ಲೇ 2013 ಮಾರ್ಚ್​ನಲ್ಲಿ ಪಾಪಾಪ್ರಜ್ಞೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ. ಮತ್ತೊಬ್ಬ ಬಾಲಾಪಾರಾಧಿಯನ್ನು ಅಪರಾಧ ನಡೆದ ಮೂರು ವರ್ಷಗಳ ಬಳಿಕ ಬಿಡುಗಡೆ ಮಾಡಲಾಗಿತ್ತು.(ಏಜೆನ್ಸೀಸ್​)
ನಿರ್ಭಯಾ ಕೊಲೆ ಪ್ರಕರಣದ ಅಪರಾಧಿಗಳಿಗೆ ಗಲ್ಲು: ತಾಯಿ ಆಶಾದೇವಿ ಅವರ ಮೊದಲ ಪ್ರತಿಕ್ರಿಯೆ ಇದಾಗಿತ್ತು..

ತಿಹಾರ್​ ಜೈಲಿನಲ್ಲಿ ನೇಣುಗಂಬಕ್ಕೆ ಏರಿದ ನಿರ್ಭಯಾ ಅತ್ಯಾಚಾರ ಅಪರಾಧಿಗಳು; ಮಾಡಿದ ಪಾಪಕ್ಕೆ ಕುಣಿಕೆಯಲ್ಲಿ ಹೋಯ್ತು ಜೀವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
