ನವದೆಹಲಿ:ಭಾರತದ ಮಹತ್ವಾಕಾಂಕ್ಷೆ ಯೋಜನೆ ಚಂದ್ರಯಾನ-3 ಯಶಸ್ವಿಯಾಗುವ ಮೂಲಕ ಭಾರತೀಯ ಸಂಶೋಧನಾ ಕೇಂದ್ರ (ಇಸ್ರೋ)ದ ವಿಜ್ಞಾನಿಗಳ ಶ್ರಮ ಹಾಗೂ ದೇಶದ ಜನರ ಪಾರ್ಥನೆಗೆ ಫಲ ಸಿಕ್ಕಿದೆ. ವಿಕ್ರಮ್​ ಲ್ಯಾಂಡರ್​ ಅನ್ನು ಸಾಫ್ಟ್​ ಆಗಿ ಲ್ಯಾಂಡ್​ ಮಾಡುವ ಮೂಲಕ ಚಂದ್ರನ ಮೇಲೆ ಇಳಿದ ನಾಲ್ಕನೇ ದೇಶ ಎಂಬ ಹೆಗ್ಗಳಿಕೆ ಗಳಿಸಿದ್ದಲ್ಲದೆ, ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶ ಎಂಬ ಸಾಧನೆಗೆ ಭಾರತ ಭಾಜನವಾಗಿದೆ.
ಚಂದ್ರಯಾನ ಯಶಸ್ಸಿನಿಂದ ಇಡೀ ರಾಷ್ಟ್ರವೇ ಸಂತಸದ ಅಲೆಯಲ್ಲಿ ತೇಲುತ್ತಿದೆ. ವಿದೇಶದ ಗಣ್ಯರು ಕೂಡ ಭಾರತಕ್ಕೆ ಶುಭ ಹಾರೈಸಿದ್ದಾರೆ. ಇದರ ನಡುವೆ ಪಾಕಿಸ್ತಾನದ ನಟಿ ಸೆಹರ್​ ಶಿನ್ವಾರಿ, ಚಂದ್ರಯಾನ ಯಶಸ್ಸಿನ ಬಗ್ಗೆ ನೀಡಿರುವ ಹೇಳಿಕೆ ಭಾರೀ ವೈರಲ್​ ಆಗಿದೆ. ಇಸ್ರೋ ಯಶಸ್ಸಿಗೆ ಅಭಿನಂದನೆ ಸಲ್ಲಿಸಿರುವ ಶಿನ್ವಾರಿ, ವಿಜ್ಞಾನ ಮತ್ತು ತಂತ್ರಜ್ಞಾನ ವಿಚಾರದಲ್ಲಿ ಭಾರತಕ್ಕಿಂತ ತಮ್ಮ ದೇಶ ಎಷ್ಟು ಹಿಂದೆ ಬಿದ್ದಿದೆ ಎಂಬುದನ್ನು ಈ ಚಂದ್ರಯಾನ-3 ಯಶಸ್ಸು ತೋರಿಸಿದೆ ಎಂದು ಒಪ್ಪಿಕೊಂಡಿದ್ದಾರೆ.
ಇದನ್ನೂ ಓದಿ:ಕಾವೇರಿ ಸಂಕಷ್ಟ ಸೂತ್ರ, ಕಾನೂನು ಸಮರ: ಸರ್ವಪಕ್ಷ ಸಭೆಯಲ್ಲಿ ಒಮ್ಮತದ ಬಲ; ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ರಾಜ್ಯ ಸರ್ಕಾರದ ಆಗ್ರಹ
ಉಭಯ ದೇಶಗಳ ನಡುವಿನ ಹಗೆತನವನ್ನು ಹೊರತುಪಡಿಸಿ, ಚಂದ್ರಯಾನ 3 ಮೂಲಕ ಬಾಹ್ಯಾಕಾಶ ಸಂಶೋಧನೆಯಲ್ಲಿ ಇತಿಹಾಸ ಬರೆದ ಇಸ್ರೋಗೆ ನಾನು ನಿಜವಾಗಿಯೂ ಅಭಿನಂದನೆ ಸಲ್ಲಿಸುತ್ತೇನೆ. ಪಾಕಿಸ್ತಾನ ಮತ್ತು ಭಾರತ ನಡುವೆ ಇರುವ ಎಲ್ಲ ಅಂತರವು ಎಲ್ಲ ಅಂಶಗಳಲ್ಲಿ ಎಷ್ಟು ಮಟ್ಟಕ್ಕೆ ವಿಸ್ತರಿಸಿದೆ ಎಂದರೆ ಭಾರತದ ಸರಿಸಮಾನಕ್ಕೆ ಬರಲು ಪಾಕಿಸ್ತಾನಕ್ಕೆ ಎರಡರಿಂದ ಮೂರು ದಶಕಗಳನ್ನೇ ತೆಗೆದುಕೊಳ್ಳುತ್ತದೆ ಎಂದು ಶಿನ್ವಾರಿ ಹೇಳಿದ್ದಾರೆ.
Apart from animosity with India, I would really congratulate ISRO for making history in the space research through Chandaryan3. The gap between Pakistan and India has widened to such a level in all aspects that now it will take two to three decades for Pakistan to reach there.…
— Sehar Shinwari (@SeharShinwari)August 23, 2023

ದುರದೃಷ್ಟವಶಾತ್, ನಮ್ಮ ಇಂದಿನ ದುಸ್ಥಿತಿಗೆ ನಾವೇ ಕಾರಣ ಹೊರತು ಬೇರೆ ಯಾರೂ ಅಲ್ಲ. ಮೌಲ್ವಿ ತಮೀಜುದ್ದೀನ್ ಅವರ ಅಸೆಂಬ್ಲಿಯನ್ನು ಅಕ್ರಮವಾಗಿ ವಿಸರ್ಜಿಸಿದಾಗಿನಿಂದ ನಾವು ದೇಶದಲ್ಲಿ ಕಾನೂನು ಮತ್ತು ಸಂವಿಧಾನದ ಪರಮಾಧಿಕಾರಕ್ಕಾಗಿ ಶ್ರಮಿಸುತ್ತಿದ್ದೇವೆ. ಇದರ ನಡುವೆ ಇಂದು ಭಾರತ ಎಲ್ಲಿಗೆ ತಲುಪಿದೆ ಎಂಬುದನ್ನು ನೋಡಿ ನಮ್ಮ ತಲೆಗಳು ನಿಜವಾಗಿಯೂ ನಾಚಿಕೆಯಿಂದ ಇಂದು ಬಾಗುತ್ತಿವೆ. ಇಂದು ನಮ್ಮ ನಡುವೆ ಪ್ರಾರಂಭವಾದ ಅಂತರವು ಎಷ್ಟರಮಟ್ಟಿಗೆ ಬೆಳೆದಿದೆ ಎಂಬುದನ್ನು ಭಾರತ ಸಾಬೀತುಪಡಿಸಿದೆ. ಇದನ್ನು ನೋಡಿ ನಮಗೆ ನಾಚಿಕೆಯಾಗಬೇಕು. ಆದರೆ, ಅದನ್ನು ತಲುಪುವುದು ನಮಗೆ ದೊಡ್ಡ ವಿಷಯವೇ ಅಲ್ಲ ಎಂದು ಶಿನ್ವಾರಿ ಹೇಳಿದರು.
ಅಂದಹಾಗೆ ಸೆಹರ್ ಶಿನ್ವಾರಿ ಹುಟ್ಟಿದ್ದು ಪಾಕಿಸ್ತಾನದ ಹೈದರಾಬಾದ್​ನಲ್ಲಿ. ಖೈಬರ್‌ನಲ್ಲಿ “ಸೈರ್ ಸಾವಾ ಸೈರ್” ಎಂಬ ಹಾಸ್ಯ ಸರಣಿಯೊಂದಿಗೆ 2014 ರಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಿದಳು. 2015 ರಲ್ಲಿ ಕರಾಚಿ ಸ್ಟೇಷನ್​ ಮಾಧ್ಯಮದಲ್ಲಿ ಬೆಳಗಿನ ಕಾರ್ಯಕ್ರಮದ ನಿರೂಪಕಿಯಾಗಿಯು ಕೆಲಸ ಮಾಡಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ತನ್ನ ನಟನೆ ಮತ್ತು ವೈರಲ್ ವಿಡಿಯೋಗಳಿಂದಲೇ ಸೆಹರ್​ ಹೆಸರುವಾಸಿಯಾಗಿದ್ದಾಳೆ. ಟಿಕ್‌ಟಾಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಸೆಹರ್​ ತುಂಬಾ ಸಕ್ರಿಯಳಾಗಿದ್ದಾಳೆ. ಇನ್​ಸ್ಟಾಗ್ರಾಂನಲ್ಲಿ 33,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾಳೆ. ಆಕೆಯ ಟ್ವೀಟ್‌ಗಳು ಈ ಹಿಂದೆ ಮಾಧ್ಯಮಗಳ ಗಮನವನ್ನು ಸೆಳೆದಿದ್ದವು.
ಇದನ್ನೂ ಓದಿ:ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ದಂಗೆ ಎದ್ದಿದ್ದಾತ ವಿಮಾನ ಅಪಘಾತದಲ್ಲಿ ನಿಧನ!
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಬಂಧನವಾದಾಗ ದೇಶಾದ್ಯಂತ ಭುಗಿಲೆದ್ದಿದ್ದ ಹಿಂಸಾಚಾರಕ್ಕೆ ಪ್ರಧಾನಿ ಮೋದಿ ಅವರೇ ಕಾರಣ ಎಂದು ಹೇಳಿ ಶಿನ್ವಾರಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಳು. ನನ್ನ ದೇಶ ಪಾಕಿಸ್ತಾನದಲ್ಲಿ ಈಗ ಉಂಟಾಗಿರುವ ಅವ್ಯವಸ್ಥೆ ಮತ್ತು ಭಯೋತ್ಪಾದನೆಯನ್ನು ಹರಡುತ್ತಿರುವ ಭಾರತದ ಪ್ರಧಾನಿ ಮತ್ತು ಭಾರತೀಯ ಗುಪ್ತಚರ ಸಂಸ್ಥೆ RAW ವಿರುದ್ಧ ನಾನು ದೂರು ದಾಖಲಿಸಬೇಕಾಗಿದೆ, ಯಾರಾದರೂ ದೆಹಲಿ ಪೊಲೀಸರ ವೆಬ್​ಸೈಟ್​ ಲಿಂಕ್​ ಇದ್ದರೆ ಕಳುಹಿಸಿಕೊಡಿ ಎಂದು ಕೇಳಿದ್ದಳು. ಭಾರತೀಯ ನ್ಯಾಯಾಲಯಗಳು ಸ್ವತಂತ್ರವಾಗಿದ್ದರೆ ಅಲ್ಲಿನ ಸುಪ್ರೀಂ ಕೋರ್ಟ್ ನನಗೆ ನ್ಯಾಯವನ್ನು ನೀಡುತ್ತದೆ ಎಂದು ನನಗೆ ಖಾತ್ರಿಯಿದೆ ಎಂದು ಟ್ವೀಟ್​ ಮಾಡಿದ್ದಳು.
ನಟಿಯ ಟ್ವೀಟ್​ಗೆ ಪ್ರತಿಕ್ರಿಯಿಸಿದ್ದ ದೆಹಲಿ ಪೊಲೀಸರು ನಮ್ಮ ಕಾರ್ಯವ್ಯಾಪ್ತಿ ಪಾಕಿಸ್ತಾನಕ್ಕೆ ಒಳಪಡುವುದಿಲ್ಲ. ನಿಮ್ಮ ದೇಶದಲ್ಲಿ ಇಂಟರ್​ನೆಟ್​ ಸೌಲಭ್ಯ ಕಡಿತಗೊಂಡಿದ್ದರೂ ನೀವು ಹೇಗೆ ಟ್ವೀಟ್​ ಮಾಡುತ್ತಿದ್ದೀರಾ ಎಂದು ಪ್ರಶ್ನಿಸುವ ಮೂಲಕ ಟಾಂಗ್​ ಕೊಟ್ಟಿದ್ದರು. ಇದೇ ವಿಚಾರ ಜಾಲತಾಣದಲ್ಲಿ ಭಾರೀ ಚರ್ಚೆಯಾಗಿತ್ತು. ಯಾರು ಈ ಸೆಹರ್​ ಶಿನ್ವಾರಿ ಎಂದು ಅನೇಕರು ಪ್ರಶ್ನಿಸಿದ್ದರು. ಅಲ್ಲದೆ, ಆಕೆ ತನ್ನ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಕ್ರೋಶ ಹೊರಹಾಕುವ ಮೂಲಕ ನೆಟ್ಟಿಗರು ಶಿನ್ವಾರಿಗೆ ಮಹಾ ಮಂಗಳಾರತಿ ಮಾಡಿದ್ದರು.(ಏಜೆನ್ಸೀಸ್​)
ಯಾರು ಈ ಸೆಹರ್​ ಶಿನ್ವಾರಿ? ಪ್ರಧಾನಿ ಮೋದಿ ವಿರುದ್ಧ ಮಾತನಾಡಿ ಮಂಗಳಾರತಿ ಮಾಡಿಸಿಕೊಂಡ ನಟಿ

ಪ್ರಧಾನಿ ಮೋದಿ ವಿರುದ್ಧ ದೂರು ನೀಡಲು ಮುಂದಾದ ಪಾಕ್​ ನಟಿ; ಟಾಂಗ್​ ಕೊಟ್ಟ ದೆಹಲಿ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − six =
Remember me
