ಕೋಲ್ಕತ್ತ :ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಮುಗಿದ ಬೆನ್ನಲ್ಲೇ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಕೊಲೆಯಲ್ಲಿ ಆಡಳಿತಾರೂಢ ಟಿಎಂಸಿ ಕೈವಾಡವಿದೆ ಎಂದು ಬಿಜಿಪಿ ಆರೋಪಿಸಿದೆ. ಅದೇ ವೇಳೆ ಕೌಟುಂಬಿಕ ಕಲಹದಿಂದ ಕೊಲೆ ನಡೆದಿದೆ ಎಂದು ಟಿಎಂಸಿ ಹೇಳಿಕೊಂಡಿದೆ.
ಇದನ್ನು ಓದಿ :https://www.vijayavani.net/cm-kejriwal-to-visit-raj-ghat-hanuman-temple-before-surrendering-at-tihar
ಮೃತನನ್ನು ಹಫೀಜುರ್ ಶೇಖ್ ಎಂದು ಗುರುತಿಸಲಾಗಿದ್ದು, ಜಿಲ್ಲೆಯ ಉತ್ತರ ಭಾಗದ ಕಾಲಿಗಂಜ್‌ನಲ್ಲಿ ಶನಿವಾರ (ಜೂನ್​​ 1) ರಾತ್ರಿ ನೆರೆಹೊರೆಯವರೊಂದಿಗೆ ಹಫೀಜುರ್ ಶೇಖ್ ಕೇರಂ ಆಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹಫೀಜುರ್ ಶೇಖ್ ಪರಾರಿಯಾಗಲು ಪ್ರಯತ್ನಿಸಿದಾಗ ಆತನ ಸಾವನ್ನು ಆತನ ಸಾವನ್ನು ಖಚಿತಪಡಿಸಿಕೊಳ್ಳಲು ದುಷ್ಕರ್ಮಿಗಳು ಗುಂಡು ಹಾರಿಸಿ, ಥಳಿಸಿದ್ದಾರೆ. ದಾಳಿಕೋರರಲ್ಲಿ ಕೆಲವರು ಖಾಕಿ ಸಮವಸ್ತ್ರ ಧರಿಸಿ ಪೊಲೀಸ್ ಸಿಬ್ಬಂದಿಯಂತೆ ಕಾಣುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.ಇತ್ತೀಚೆಗೆ ಬಿಜೆಪಿಗೆ ಸೇರಿದ್ದಕ್ಕಾಗಿ ಅವರನ್ನು ಕೊಲೆ ಮಾಡಲಾಗಿದೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಟಿಎಂಸಿ ಗೂಂಡಾಗಳು ಪಕ್ಷದ ಕಾರ್ಯಕರ್ತನನ್ನು ಹತ್ಯೆ ಮಾಡಿದ್ದಾರೆ ಎಂದು ಬಿಜೆಪಿಯ ಉತ್ತರ ನಾಡಿಯಾ ಘಟಕದ ಅಧ್ಯಕ್ಷ ಅರ್ಜುನ್ ಬಿಸ್ವಾಸ್ ಆರೋಪಿಸಿದ್ದಾರೆ. ಆದರೆ, ಜಿಲ್ಲಾ ಟಿಎಂಸಿ ನಾಯಕ ರುಕ್ಬಾನೂರ್ ರೆಹಮಾನ್ ಹತ್ಯೆಯ ಹಿಂದೆ ಕೌಟುಂಬಿಕ ಕಲಹವೇ ಕಾರಣವಾಗಿದ್ದು, ಇದರಲ್ಲಿ ತೃಣಮೂಲ ಕಾಂಗ್ರೆಸ್‌ನ ಪಾತ್ರವಿಲ್ಲ ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ವಿಸ್ತಾರಾ ಏರ್‌ಲೈನ್ಸ್‌ಗೆ ಬಾಂಬ್ ಬೆದರಿಕೆ : ತುರ್ತು ಭೂಸ್ಪರ್ಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + ten =
Remember me
