ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಸಹಜವಾಗಿಯೇ ಕರೊನಾ ಲಸಿಕೆ ಸಂಶೋಧನೆ ಹಾಗೂ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ.ಸ್ವಾತಂತ್ರ್ಯೋತ್ಸವ ದಿನದಂದೇ ಕರೊನಾ ಲಸಿಕೆ ಬಳಕೆಗೆ ದೊರೆಯುವಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದೇ ತಿಂಗಳ ಹಿಂದೆ ಭಾರಿ ಚರ್ಚೆ ನಡೆದಿತ್ತು. ಆದರೆ, ಲಸಿಕೆ ಶೀಘ್ರದಲ್ಲಿಯೇ ದೊರೆಯಲಿದೆ ಎಂದು ಪ್ರಕಟಿಸಿದ್ದಾರೆ.
ಸದ್ಯ ಮೂರು ಲಸಿಕೆಗಳು ಬೇರೆ ಬೇರೆ ಹಂತದ ಪ್ರಯೋಗದಲ್ಲಿವೆ. ತಜ್ಞರು ಹಸಿರು ನಿಶಾನೆ ನೀಡಿದ ಕೂಡಲೇ ಉತ್ಪಾದನೆ ಆರಂಭಿಸುವ ಯೋಜನೆ ಸಿದ್ಧವಾಗಿದೆ. ಪ್ರತಿ ಭಾರತೀಯನಿಗೂ ಲಸಿಕೆಯನ್ನು ಹೇಗೆ ತಲುಪಿಸಬೇಕೆಂಬ ಯೋಜನೆಯನ್ನೂ ರೂಪಿಸಲಾಗಿದೆ ಎಂದು ಮೋದಿ ತಿಳಿಸಿದ್ದಾರೆ.
ಇದನ್ನೂ ಓದಿ;ಭಾರತೀಯರಿಗೆ ಶುಭಸುದ್ದಿ; ದೇಶೀಯ ಕರೊನಾ ಲಸಿಕೆ ಕೊವಾಕ್ಸಿನ್​ ಮಾನವರ ಬಳಕೆಗೆ ಸುರಕ್ಷಿತ; ಆರಂಭಿಕ ಯಶಸ್ಸು
ಸಹಜವಾಗಿಯೇ ಯಾವವು ಈ ಲಸಿಕೆಗಳು ಎಂದು ಕುತೂಹಲ ಮೂಡುವುದು ಸಹಜ. ಈ ಪೈಕಿ ಹೈದರಾಬಾದ್​ನ ಭಾರತ್​ ಬಯೋಟೆಕ್​ ಅಭಿವೃದ್ಧಿಪಡಿಸಿರುವ ಕೊವಾಕ್ಸಿನ್​ ಮಾನವರ ಮೇಲಿನ ಮೊದಲ ಹಂತದ ಪ್ರಯೋಗದಲ್ಲಿ ಸುರಕ್ಷಿತ ಎನಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನೊಂದೆಡೆ, ಗುಜರಾತ್​ನ ಅಹ್ಮದಾಬಾದ್​ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಝೈಡಸ್​ ಕ್ಯಾಡಿಲ್ಲಾ ಕಂಪನಿ ಅಭಿವೃದ್ಧಿ ಪಡಿಸಿರುವ ಲಸಿಕೆ ಕೂಡ ಎರಡನೇ ಹಂತದ ಪರೀಕ್ಷೆಯಲ್ಲಿ ತೊಡಗಿಕೊಂಡಿದೆ. ದೇಶದ 11 ಸ್ಥಳಗಳಲ್ಲಿ ಇದರ ಮೊದಲ ಹಂತದ ಪರೀಕ್ಷೆ ನಡೆಸಲಾಗಿದೆ.
ಇದನ್ನೂ ಓದಿ;ಕರೊನಾ ಸಂಕಷ್ಟ ಮುಗಿಯುವವರೆಗೆ ಶಾಲೆ ತೆರೆಯಲ್ಲ; ಪಾಲಕರಿಗೆ ಭರವಸೆ ನೀಡಿದ್ಯಾರು?
ಇನ್ನೊಂದೆಡೆ, ಪುಣೆಯ ಸಿರಂ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ಎರಡನೇ ಹಾಗೂ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​ಗೆ ಔಷಧ ಮಹಾನಿಯಂತ್ರಕರಿಂದ ಪರವಾನಗಿ ಪಡೆದಿದೆ. ಆಕ್ಸ್​ಫರ್ಡ್​ ವಿವಿ ತಂಡ ಅಭಿವೃದ್ಧಿಪಡಿಸುತ್ತಿರುವ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸುವ ಹೊಣೆ ಇದರದ್ದಾಗಿದೆ. ಈ ಲಸಿಕೆ ಈಗಾಗಲೇ ಬ್ರಿಟನ್​ನಲ್ಲಿ ಮೂರನೇ ಹಂತದ ಪರೀಕ್ಷೆಯನ್ನು 30 ಸಾವಿರ ಜನರ ಮೇಲೆ ನಡೆಸುತ್ತಿದೆ.
ಇದಲ್ಲದೇ, ಇನ್ನೂ ಹಲವು ಕಂಪನಿಗಳು ಲಸಿಕೆ ಅಭಿವೃದ್ಧಿಯ ವಿವಿಧ ಹಂತದಲ್ಲಿವೆ. ಹಲವು ವಿದೇಶಿ ಕಂಪನಿಗಳು ಭಾರತದ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಲಸಿಕೆ ಸಂಶೋಧನೆಯಲ್ಲಿ ತೊಡಗಿವೆ.
ಕೇಂದ್ರ ಸರ್ಕಾರವೇ ವಿತರಿಸಲಿದೆ ಕರೊನಾ ಲಸಿಕೆ; ಸಾರ್ವಜನಿಕರಿಗೆ ಬೇಕಿಲ್ಲ ಆತಂಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 2 =
Remember me
