ನವದೆಹಲಿ: ಕರೊನಾ ಸೋಂಕಿನ ಎರಡನೇ ಅಲೆ ಬಗ್ಗೆ ಅಲ್ಲಲ್ಲಿ ಮಾತುಗಳು ಕೇಳಿ ಬರುತ್ತಿದ್ದು, ಇದೀಗ ಆ ಕುರಿತ ಮಾತು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ವಿಶೇಷವೆಂದರೆ, ಆ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ ಅವರೇ ಪ್ರತಿಕ್ರಿಯಿಸಿದ್ದಾರೆ.
ಸೋಂಕಿನಿಂದ ಒಮ್ಮೆ ಗುಣವಾದವರು ಮತ್ತೆ ಸೋಂಕು ತಗುಲುವ ಭಯದಿಂದ ಮುಕ್ತರಲ್ಲ. ಭಾರತ ಮಾತ್ರವಲ್ಲದೆ ಜಗತ್ತಿನ ಇತರ ಭಾಗಗಳಲ್ಲೂ ಒಮ್ಮೆ ಸೋಂಕುಮುಕ್ತರಾದವರೂ ಮತ್ತೆ ಸೋಂಕಿಗೆ ಒಳಗಾದ ಪ್ರಕರಣಗಳು ವರದಿಯಾಗಿವೆ. ಅದಾಗ್ಯೂ ಅಂಥ ಪ್ರಕರಣಗಳು ನಗಣ್ಯ ಎಂಬ ಪ್ರಮಾಣದಲ್ಲಿ ಇರುವುದರಿಂದ ಆ ಬಗ್ಗೆ ಹೆಚ್ಚು ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಸಚಿವ ಹರ್ಷವರ್ಧನ್​ ತಿಳಿಸಿದ್ದಾರೆ.
ಕೋವಿಡ್​ ರೋಗಿಯ ವರದಿಯನ್ನು ಸೂಕ್ಷ್ಮವಾಗಿ ಅಧ್ಯಯನ ನಡೆಸಲಾಗುತ್ತಿದೆ. ಪುನಃ ಸೋಂಕು ತಗುಲುವ ಕುರಿತು ಪರೀಕ್ಷೆಗಳು ನಡೆಯುತ್ತಿವೆ. ಸದ್ಯದ ಪರಿಸ್ಥಿತಿಯಲ್ಲಿ ಅಂಥ ರಿಸ್ಕ್​ಗಳು ಕಡಿಮೆ ಇವೆ ಎಂದು ಸಚಿವರು ಹೇಳಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
