ನವದೆಹಲಿ:ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಜಾತಿಯ ಬಗ್ಗೆ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ(ಜುಲೈ 31) ಹೇಳಿದ್ದಾರೆ.
ಇದನ್ನು ಓದಿ:ಪ್ರಧಾನಿ ಮೋದಿ ವಿರುದ್ಧ ಹಕ್ಕು ಚ್ಯುತಿ ಮಂಡಿಸಿದ ಕಾಂಗ್ರೆಸ್​;​​ ಕಾರಣ ಹೀಗಿದೆ
ರಾಹುಲ್​ಗಾಂಧಿ ಅವರು ಜಾತಿಯ ಆಧಾರದ ಮೇಲೆ ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಜನರ ಜಾತಿಯನ್ನು ದಿನ ಬಿಟ್ಟು ದಿನ ಕೇಳುತ್ತಿದ್ದಾರೆ. ಜನರ ಜಾತಿ ಕೇಳುವ ಮೂಲಕ ಕಾಂಗ್ರೆಸ್ ದೇಶವನ್ನು ವಿಭಜಿಸಲು ಪಿತೂರಿ ನಡೆಸಿದೆ. ರಾಹುಲ್ ಗಾಂಧಿಯವರ ಜಾತಿಯ ಬಗ್ಗೆ ಮಾತನಾಡುವಾಗ ಮಾತ್ರ ತುಂಬಾ ಪ್ರತಿಭಟನೆಗಳು ನಡೆಯುತ್ತವೆ ಎಂದು ರಿಜಿಜು ಹೇಳಿದರು.
ಕಾಂಗ್ರೆಸ್ ದಿನ ಬಿಟ್ಟು ದಿನ ಜಾತಿಯ ಬಗ್ಗೆ ಮಾತನಾಡುತ್ತದೆ. ಅವರು (ರಾಹುಲ್ ಗಾಂಧಿ) ಮಾಧ್ಯಮ ಪ್ರತಿನಿಧಿಗಳನ್ನು ಭೇಟಿಯಾದಾಗ ಅವರ ಜಾತಿಯನ್ನು ಕೇಳುತ್ತಾರೆ. ಸಶಸ್ತ್ರ ಪಡೆ ಸಿಬ್ಬಂದಿಯ ಜಾತಿಯನ್ನು ಕೇಳುತ್ತಾರೆ. ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಜನರ ಜಾತಿಯನ್ನು ಕೇಳುತ್ತಾರೆ. ಅವರು ಜನರ ಜಾತಿಯ ಬಗ್ಗೆ ಕೇಳಬಹುದು ಆದರೆ ಅವರ ಜಾತಿಯ ಬಗ್ಗೆ ಯಾರೂ ಕೇಳಬಾರದು ಎಂದರೆ ಹೇಗೆ ಎಂದು ಪ್ರಶ್ನಿಸಿದರು.
VIDEO | "I condemn the act of Congress. They talk caste all the time through the day and night. They ask caste of media, military people. They conspired to divide the nation on the basis of caste. When Rahul Gandhi's caste was asked, they got angered. Why can't we ask the caste?…pic.twitter.com/oeEi2RG3KV
ದೇಶ, ಪ್ರಜಾಪ್ರಭುತ್ವ ಮತ್ತು ಆರ್ಥಿಕತೆಯನ್ನು ದುರ್ಬಲಗೊಳಿಸಲು ಕಾಂಗ್ರೆಸ್ ಪಿತೂರಿ ನಡೆಸುತ್ತಿದೆ. ಜನರನ್ನು ವಿಭಜಿಸುವ ಕಾಂಗ್ರೆಸ್​​ ಪ್ರಯತ್ನಗಳನ್ನು ಯಶಸ್ವಿಯಾಗಲು ಬಿಜೆಪಿ ಬಿಡುವುದಿಲ್ಲ ಎಂದು ತಿಳಿಸಿದರು. ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಲೋಕಸಭೆಯಲ್ಲಿ ಮಂಗಳವಾರ (ಜುಲೈ 31) ಜಾತಿ ಗೊತ್ತಿಲ್ಲದವರು ಜಾತಿಗಣತಿಯ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಿದ್ದರು. (ಏಜೆನ್ಸೀಸ್​​)
ವಯನಾಡು ಭೂಕುಸಿತ, ಮುನ್ನೆಚ್ಚರಿಕೆ ನೀಡಿದ್ದರೂ ಕೇರಳ ಸರ್ಕಾರ ಕ್ರಮಕೈಗೊಳ್ಳಲಿಲ್ಲ: ಅಮಿತ್​ ಷಾ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 12 =
Remember me
