ಉತ್ತರಪ್ರದೇಶ:ಮಹಿಳೆಯೊಬ್ಬರು ತನ್ನ ಅಸ್ವಸ್ಥ ಸಹೋದರನ ಜೀವ ಉಳಿಸಲು ಕಿಡ್ನಿ ದಾನ ಮಾಡಿದ ವಿಷಯ ತಿಳಿದ ಆಕೆಯ ಪತಿ, ಮಹಿಳೆಗೆ ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ನೀಡಿದ ಘಟನೆ ಉತ್ತರಪ್ರದೇಶದ ಗೊಂಡಾದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಹೆತ್ತ ತಾಯಿಗಾಗಿ 10 ವರ್ಷಗಳಿಂದ ಹುಡುಕಾಟ: ಸ್ವಿಟ್ಜರ್ಲೆಂಡ್​ನಿಂದ ಮುಂಬೈಗೆ ಬಂದ ಯುವತಿಗೆ ಗಂಡನ ಸಾಥ್​!
ಸಂತ್ರಸ್ತ ಮಹಿಳೆ ತರನ್ನುಮ್ ಅವರ ಪತಿ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದು, ತನ್ನ ಹೆಂಡತಿ ಸಹೋದರನಿಗೆ ಕಿಡ್ನಿ ದಾನ ಮಾಡಿದ ಸಂಗತಿ ತಿಳಿದು ಆಕ್ರೋಶ ವ್ಯಕ್ತಪಡಿಸಿದ್ದಾನೆ. ಪತ್ನಿಯ ಜತೆ ಜಗಳವಾಡಿದ ಪತಿ ಮೊಹಮ್ಮದ್ ರಶೀದ್, ಈ ವಿಚಾರವಾಗಿ ಮಹಿಳೆಯೊಂದಿಗೆ ಪದೇ ಪದೇ ಜಟಾಪಟಿ ನಡೆಸಿದ್ದಾನೆ.
ತನ್ನ ಹೆಂಡತಿ ಆಕೆಯ ಸಹೋದರನಿಗೆ ಕಿಡ್ನಿ ದಾನ ಮಾಡಿದ್ದೇನೆ ಎಂದು ಹೇಳಿದ್ದಕ್ಕೆ ಸಿಡಿಮಿಡಿಗೊಂಡ ಪತಿ ರಶೀದ್, ಜಗಳವಾಡಿದ್ದಲ್ಲದೇ ತರನ್ನುಮ್‌ ಬಳಿ 40 ಲಕ್ಷ ರೂ. ಹಣ ಕೊಡುವಂತೆ ಬೇಡಿಕೆಯಿಟ್ಟಿದ್ದ. ಇದ್ದಕ್ಕೆ ಮಹಿಳೆ ಸುತಾರಾಮ್ ನಿರಾಕರಿಸಿದ್ದಾರೆ. ಪತ್ನಿಯ ನಿರಾಕರಣೆ ಖಂಡಿಸಿದ ಪತಿ, ಆಕೆಗೆ ಆಗಸ್ಟ್ 30 ರಂದು ವಾಟ್ಸಾಪ್ ಮುಖೇನ ತ್ರಿವಳಿ ತಲಾಖ್ ಸಂದೇಶವನ್ನು ಕಳುಹಿಸಿದ್ದಾನೆ.
ಇದನ್ನೂ ಓದಿ:ತಾಜ್​ ಮಹಲ್​ಗೊಂದು ಪ್ರತಿಸ್ಪರ್ಧಿ: ಉತ್ತರ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಮಸೀದಿ ಬಗ್ಗೆ ಬಿಜೆಪಿ ಮುಖಂಡ ನೀಡಿದ ವಿವರಗಳು ಕುತೂಹಲಕಾರಿ
ಈ ಘಟನೆಯ ಬೆನ್ನಲ್ಲೇ ತರನ್ನುಮ್ ತನ್ನ ತವರು ಮನೆಯಲ್ಲಿ ವಾಸವಿದ್ದರು. ಇದೀಗ ಪತಿ ವಿರುದ್ಧ ಪೊಲೀಸ್ ಕೇಸ್ ದಾಖಲಿಸಿ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಈ ವಿಚಾರಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ,(ಏಜೆನ್ಸೀಸ್).
ಟಿಕೆಟ್ ಮಾರಾಟದಲ್ಲಿ ‘ಸಲಾರ್’ ಅಬ್ಬರ! ಯಾವ ರಾಜ್ಯದಲ್ಲಿ ಎಷ್ಟೆಷ್ಟು? ಇಲ್ಲಿದೆ ವಿವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + nine =
Remember me
