ಸಿದ್ದಿಪೇಟ್:ಮಹಿಳೆಯ ಗಂಟಲು ಕತ್ತರಿಸಿ ಕಾಲುಗಳನ್ನು ದೇಹದಿಂದ ಬೇರ್ಪಡಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ಬಂದಮೈಲಾರಂನಲ್ಲಿ ನಡೆದಿದೆ.
ಮುಳುಗು ಮಂಡಲದ ವೆಂಕಟಮ್ಮ(40) ಮೃತ ಮಹಿಳೆಯಾಗಿದ್ದು, ಈಕೆಯ ಪತಿ ಈ ಹಿಂದೆಯೇ ಮೃತಪಟ್ಟಿದ್ದನು. ಈಕೆ ತನ್ನ ಮೂವರು ಮಕ್ಕಳೊಂದಿಗೆ ಹಳ್ಳಿಯಲ್ಲಿ ವಾಸಿಸುತ್ತಿದ್ದು, ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಳು.
ಇದನ್ನೂ ಓದಿ:ಪತಿಯನ್ನು ಫಂಕ್ಷನ್​ಗೆ ಕಳುಹಿಸಿ, ಆತನ ಗೆಳೆಯನ ಜೊತೆ ಪರಾರಿಯಾದ ಪತ್ನಿ..!
ಆದರೆ ನಿನ್ನೆ ರಾತ್ರಿ ಅಪರಿಚಿತ ದುಷ್ಕರ್ಮಿಗಳು ವೆಂಕಟಮ್ಮ ಮನೆಗೆ ನುಗ್ಗಿ ಕೊಲೆ ಮಾಡಿದ್ದು, ಮೊದಲು ಕತ್ತು ಕೊಯ್ದು, ನಂತರ ದೇಹದಿಂದ ಕಾಲುಗಳನ್ನು ಬೇರ್ಪಡಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸ್ಥಳೀಯರಿಂದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ವಶಕ್ಕೆ ಪಡೆದು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮಹಿಳೆಯೊಬ್ಬಳನ್ನು ಅಮಾನುಷವಾಗಿ ಕಾಲುಗಳನ್ನು ಬೇರ್ಪಡಿಸಿ ಹತ್ಯೆ ಮಾಡಿರುವುದು ಸ್ಥಳೀಯರಲ್ಲಿ ಸಂಚಲನ ಮೂಡಿಸಿದೆ. ತನಿಖೆಯ ನಂತರ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
