ನವದೆಹಲಿ:ಲಾಕ್​ಡೌನ್​ ಕಾರಣದಿಂದಾಗಿ ದೇಶದ ಬಹುತೇಕ ಕೈಗಾರಿಕೆ ಹಾಗೂ ಕಾರ್ಪೋರೇಟ್​ ಸಂಸ್ಥೆಗಳು ತತ್ತರಿಸಿವೆ. ವರ್ಕ್​ ಫ್ರಾಮ್​ ಹೋಮ್​ಗೆ ಅವಕಾಶ ಮಾಡಿಕೊಟ್ಟ ಐಟಿ ದಿಗ್ಗಜ ಕಂಪನಿಗಳು ಕೂಡ ನಷ್ಟದಲ್ಲಿವೆ. ಹೀಗಾಗಿ ಬಹುತೇಕ ಎಲ್ಲ ಕಂಪನಿಗಳು ಸಂಬಳ ಕಡಿತ ಘೋಷಿಸಿವೆ. ಹೆಚ್ಚಿನ ಸಂಸ್ಥೆಗಳಲ್ಲಿ ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. ಕಂಪನಿಗಳಿಗೆ ಅನುಮಕೂಲವಾಗಲಿ ಎಂಬ ಕಾರಣಕ್ಕೆ ಕಾರ್ಮಿಕ ಕಾನೂನುಗಳಿಂದಲೂ ವಿನಾಯ್ತಿ ನೀಡಲಾಗಿದೆ.
ದೇಶದ ಎಲ್ಲ ಉದ್ಯಮಗಳ ಪರಿಸ್ಥಿತಿ ಹೀಗಿರುವಾಗ ಐಟಿ ದಿಗ್ಗಜ ಕಂಪನಿಗಳಲ್ಲಿ ಒಂದಾಗಿರುವ ಸಂಸ್ಥೆಯೊಂದು ಸಿಬ್ಬಂದಿ ಸಂಬಳ ಕಡಿತ ಮಾಡಲ್ಲ ಎಂದು ಘೋಷಿಸಿದೆ. ಜತೆಗೆ ಈ ಹಿಂದೆ ಭರವಸೆ ನೀಡಿದಂತೆ ಬೋನಸ್​ ಕೂಡ ನೀಡಲಾಗುವುದು ಎಂದು ಘೋಷಿಸಿದೆ. ಪ್ರಸ್ತುತ ಈ ಸಂಸ್ಥೆಯ ಉದ್ಯೋಗಿಗಳೇ ಧನ್ಯರು ಎನ್ನಬಹುದೇನೋ?
ಇದನ್ನೂ ಓದಿ;ಅಂತರ ಜಿಲ್ಲಾ ಸಂಚಾರಕ್ಕೆ ಬೇಕಿಲ್ಲ ಪಾಸ್​; ಬಸ್​, ರೈಲು, ವಿಮಾನ ಪ್ರಯಾಣಕ್ಕೆ ಈ ನಿಯಮ ಪಾಲನೆ ಕಡ್ಡಾಯ
ಎಚ್​ಸಿಎಲ್​ ಟೆಕ್ನಾಲಜೀಸ್​ ದೇಶದ 3ನೇ ಅತಿ ದೊಡ್ಡ ಐಟಿ ಕಂಪನಿಯಾಗಿದೆ. ಎಲ್ಲ 1,50,000 ಉದ್ಯೋಗಿಗಳ ಸಂಬಳ ಕಡಿತ ಮಾಡುವುದಿಲ್ಲ ಎಂದು ಸಂಸ್ಥೆಯು ತಿಳಿಸಿದೆ. ಜತೆಗೆ, ಕಳೆದ ವರ್ಷದ ಅವಧಿಗೆ ನೀಡಬೇಕಾದ ಬೋನಸ್​ ಕೂಡ ನೀಡಲಾಗುವುದು ಎಂದು ಹೇಳಿದೆ. ಕರೊನಾ ಸಂಕಷ್ಟದ ಅವಧಿಯಲ್ಲಿ ಆದಾಯದಲ್ಲಿ ಇಳಿಕೆಯಾಗಿದ್ದರೂ ಕಂಪನಿ ಈ ಕ್ರಮ ಭಾರಿ ಪ್ರಶಂಸೆಗೆ ಪಾತ್ರವಾಗಿದೆ.
ನೊಯ್ಡಾದಲ್ಲಿ ಮುಖ್ಯ ಕಚೇರಿ ಹೊಂದಿರುವ ಕಂಪನಿ, ವರ್ಷಾರಂಭದಲ್ಲಿ 15,000 ಹೊಸಬರಿಗೆ ನೀಡಲಾಗಿದ್ದ ಉದ್ಯೋಗಾವಕಾಶದ ಭರವಸೆಯನ್ನೂ ಈಡೇರಿಸುವುದಾಗಿ ಹೇಳಿ ಬದ್ಧತೆ ಮೆರೆದಿದೆ.
ಕಂಪನಿಯ ಯಾವುದೇ ಯೋಜನೆಗಳು ರದ್ದಾಗಿಲ್ಲ. ಆದರೆ, ಈಗಾಗಲೇ ಶುರುವಾಗಬೇಕಿದ್ದ ಯೋಜನೆಗಳು ವಿಳಂಬವಾಗಿವೆ. ನಮಗೆ 5000ಕ್ಕೂ ಆಧಿಕ ಉದ್ಯೋಗಿಗಳು ಬೇಕಾಗಿದ್ದಾರೆ. ಅವರ ನೇಮಕಾತಿಯನ್ನು ಮಾಡಿಕೊಳ್ಳಲಿದ್ದೇವೆ ಎಂದು ಎಚ್​ಸಿಎಲ್​ನ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ವಿ.ವಿ. ಅಪ್ಪಾರಾವ್​ ತಿಳಿಸಿದ್ದಾರೆ.
ಇದನ್ನೂ ಓದಿ;ನರ್ಸರಿ ಮಕ್ಕಳ ಗತಿಯೇನು? ಶಾಲಾರಂಭ ವಿಳಂಬವಾದರೂ ಪೂರ್ತಿ ಶುಲ್ಕ ನೀಡಬೇಕೇ?
ಜುಲೈನಲ್ಲಿ ವಾರ್ಷಿಕ ವೇತನ ಹೆಚ್ಚಳ ಪ್ರಕ್ರಿಯೆ ನಡೆಯಬೇಕಿದೆ. ಆ ಸಮಯದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.ಸಾರಿಗೆ ಹಾಗೂ ಉತ್ಪಾದನಾ ವಲಯದಲ್ಲಿ ಸಂಕಷ್ಟ ಎದುರಾಗಿದೆ.
ಐಟಿ ದಿಗ್ಗಜ ಕಂಪನಿಗಳಾದ ಇನ್ಫೊಸಿಸ್​, ವಿಪ್ರೋ, ಟಿಸಿಎಸ್​ ಮೊದಲಾದ ಕಂಪನಿಗಳು ವೇತನ ಹೆಚ್ಚಳ ತಡೆಹಿಡಿದಿವೆ. ಬಡ್ತಿಯನ್ನು ಸ್ಥಗಿತಗೊಳಿಸಿವೆ. ಈ ಕಂಪನಿಗಳಲ್ಲಿ ನೇಮಕಾತಿ ಪ್ರಕ್ರಿಯೆ ಸಂಪೂರ್ಣವಾಗಿ ಬಂದ್​ ಆಗಿದೆ.
ಬೇಬಿ ಪೌಡರ್​ನಿಂದ ಕ್ಯಾನ್ಸರ್​ ವಿವಾದ; ಅಮೆರಿಕ, ಕೆನಡಾದಲ್ಲಿ ಮಾರಾಟ ನಿಲ್ಲಿಸಿದ ಜಾನ್​ಸನ್​ ಆ್ಯಂಡ್​ ಜಾನ್​ಸನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
