ನಾಗ್ಪುರ:ಸಮಾಜದ ಸುಧಾರಣೆ ಹಾಗೂ ಒಳಿತಿಗಾಗಿ ದೇಣಿಗೆ ಸಂಗ್ರಹಿಸಲು ಅಥವಾ ಭಿಕ್ಷೆ ಬೇಡಲು ನಾನು ಎಂದಿಗೂ ಹಿಂಜರಿಯುವುದಿಲ್ಲ. ಉದಾರವಾದ ದೇಣಿಗೆಗಳು ಉದಾತ್ತ ಕಾರಣಗಳನ್ನು ಬೆಂಬಲಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಅಭಿಪ್ರಾಯಪಟ್ಟಿದ್ದಾರೆ.
ನಾಗ್ಪುರದಲ್ಲಿ ಸ್ವಾಮಿ ವಿವೇಕಾನಂದ ವೈದ್ಯಕೀಯ ಮಿಷನ್​ನ 50 ನೇ ವಾರ್ಷಿಕೋತ್ಸವದ ಅಂಗವಾಗಿ ಆಸ್ಪತ್ರೆಯ ನೂತನ ಹೃದ್ರೋಗ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಪ್ರಗತಿಗೆ ಹಣಕಾಸಿನ ಸಂಪನ್ಮೂಲಗಳ ಅಗತ್ಯವನ್ನು ಒತ್ತಿ ಹೇಳಿದ್ದಾರೆ.
ಸಮಾಜದ ಸುಧಾರಣೆಗೆ ದೇಣಿಗೆ ಕೇಳಲು ನಾಚಿಕೆ ಪಡಬೇಕಾಗಿಲ್ಲ. ಹೆಚ್ಚಿನ ಒಳಿತಿಗಾಗಿ ಕೊಡುಗೆಗಳನ್ನು ಬೇಡಲು ನಾನು ಎಂದಿಗೂ ಹಿಂಜರಿಯುವುದಿಲ್ಲ. ಆರ್‌ಎಸ್‌ಎಸ್‌ನ ಬದ್ಧತೆಯ ವಿಶ್ವಾಸಾರ್ಹತೆಯನ್ನು ಶ್ಲಾಘಿಸಿದ ಅವರು ಈ ಸಂಘಟನೆ ಸಮಾಜದಿಂದ ಕಾಲಾನಂತರದಲ್ಲಿ ಪರೀಕ್ಷಿಸಲ್ಪಟ್ಟಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ವಿರಾಟ್​ ಕೊಹ್ಲಿಯನ್ನು ಸ್ವಾರ್ಥಿ ಎಂದವರು ಇಂದು ಪಾಕ್​ ಕ್ರಿಕೆಟ್​ ತಂಡದ ಮುಖ್ಯ ಕೋಚ್
ದೇಶದಲ್ಲಿ ಆರೋಗ್ಯ ಕ್ಷೇತ್ರ ಒಂದು ಉದ್ಯಮವಾಗಿ ಮಾರ್ಪಟ್ಟಿದ್ದು, ಬಡವರು ದೊಡ್ಡ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಪರದಾಡುತ್ತಿದ್ದಾರೆ. ಅವರಿಗೆ ಅಗ್ಗದ ದರಗಳಲ್ಲಿ ಆರೋಗ್ಯ ಸೇವೆ ಒದಗಿಸಲು ಸರ್ಕಾರಗಳು ಯೋಜನೆಗಳನ್ನು ರೂಪಿಸಬೇಕು ಎಂದು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಹೇಳಿದ್ದಾರೆ.
ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಆರ್‌ಎಸ್‌ಎಸ್ ಸಿದ್ಧಾಂತದ ಪ್ರಭಾವ ಮತ್ತು ಪ್ರಭಾವವು ಸಾಮಾನ್ಯ ವ್ಯಕ್ತಿಗಳಿಗೆ ಅಸಾಮಾನ್ಯ ಸಾಧನೆಗಳನ್ನು ಮಾಡಲು ಪ್ರೇರೇಪಿಸುತ್ತದೆ ಎಂದು ಹೇಳಿದರು.
ಅನ್ನ, ಬಟ್ಟೆ ಮತ್ತು ಆಶ್ರಗಳಂಥ ಸಮಸ್ಯೆಗಳನ್ನು ಎದುರಿಸುತ್ತಿದ್ದ ಸಮಾಜ ಅವರು ಈಗ ಆಗ ಸ್ಥಾನಗಳಲ್ಲಿ ಬೇರೆ ಸಮಸ್ಯೆಗಳನ್ನು ಎದುರಿಸತ್ತಿದೆ. ಸ್ವಾತಂತ್ರ್ಯ ನಂತರದಲ್ಲಿ ದಿನಗಳಲ್ಲಿ ಶಿಕ್ಷಣ, ಆದಾಯ ಮತ್ತು ಆರೋಗ್ಯ ರಕ್ಷಣೆಯಂಥ ಸಮಸ್ಯೆಗಳನ್ನು ನಾವು ಎದುರಿಸುತ್ತಿದ್ದೇವೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 9 =
Remember me
