ಗೋರಖ್‌ಪುರ:ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಇಂದಿಗೆ 51 ವರ್ಷ ತುಂಬಿದೆ. ಇವರು ತಮ್ಮ ಜನ್ಮದಿನದ ಸಂದರ್ಭದಲ್ಲಿ ಗೋರಖ್​ನಾಥ್​ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಮಾಡಿದರು.
ಕೇಂದ್ರ ರಕ್ಷಣಾ ಸಚಿವ ರಾಜಂತ್ ಸಿಂಗ್, ಗೃಹ ಸಚಿವ ಅಮಿತ್ ಮತ್ತು ಬಿಜೆಪಿಯ ಪ್ರಮುಖ ನಾಯಕರು ಸಿಎಂ ಯೋಗಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಇದನ್ನೂ ಓದಿ:ಡಬಲ್ ಇಂಜಿನ್ ಸರ್ಕಾರವನ್ನು ಬೆಂಬಲಿಸುವುದರಿಂದ ಅಭಿವೃದ್ಧಿ ಕಾರ್ಯ ಡಬಲ್ ಆಗಲಿದೆ: ಯೋಗಿ ಆದಿತ್ಯನಾಥ್
“ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿ ಯೋಗಿಜೀ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ಸಂಪೂರ್ಣ ಉತ್ಸಾಹ ಮತ್ತು ಸಮರ್ಪಣೆಯೊಂದಿಗೆ ಉತ್ತರ ಪ್ರದೇಶವನ್ನು ಅಭಿವೃದ್ಧಿ ಹೊಂದಿದ ರಾಜ್ಯವನ್ನಾಗಿ ಮಾಡಲು ಶ್ರಮಿಸುತ್ತಿದ್ದಾರೆ. ಅವರು ರಾಜ್ಯದಲ್ಲಿ ತಮ್ಮ ನೆಲವನ್ನು ಸಿದ್ಧಪಡಿಸಿದ್ದಾರೆ. ದೇವರು ಅವರಿಗೆ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಲಿ,” ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಸಿಎಂ ಯೋಗಿ ಉತ್ತರಾಖಂಡದ ಹಳ್ಳಿಯೊಂದರಲ್ಲಿ ಜೂನ್ 5, 1972 ರಂದು ಜನಿಸಿದರು. ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಚಳುವಳಿಯಲ್ಲಿ ಸೇರಲು ತಮ್ಮ ಮನೆಯನ್ನು ತೊರೆದು ಗೋರಖ್‌ಪುರದ ಗೋರಖ್​ನಾಥ್ ದೇವಾಲಯದ ಮಹಂತ್ ಅವೈದ್ಯನಾಥರ ಶಿಷ್ಯರಾದರು.
ಮಹಂತ್ ಅವೈದ್ಯನಾಥರ ಮರಣದ ನಂತರ ಅವರನ್ನು ಗೋರಖ್​ನಾಥ್​ ಮಠದ ಪ್ರಧಾನ ಅರ್ಚಕರೂ ಆದರು. ಯೋಗಿ 1998 ರಲ್ಲಿ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದ್ದು ಗೋರಖ್‌ಪುರದಿಂದ ಸಂಸದರಾಗಿ ಆಯ್ಕೆಯಾದರು. ಅವರು 1998ರಿಂದ 2017 ರವರೆಗೆ ಸತತ ಐದು ಅವಧಿಗೆ ಗೋರಖ್‌ಪುರ ಸಂಸದರಾಗಿದ್ದರು.
ಇದನ್ನೂ ಓದಿ:ಸಾರ್ವಜನಿಕ ಸೇವಾ ಸಂಖ್ಯೆಗೆ ಕರೆ ಮಾಡಿ ಯೋಗಿ ಆದಿತ್ಯನಾಥ್​ಗೆ ಜೀವ ಬೆದರಿಕೆ ಹಾಕಿದ ಭೂಪ!
ಅವರು ತಮ್ಮ ಪೂರ್ಣ ಐದು ವರ್ಷಗಳ ಅವಧಿಯ ನಂತರ ಈ ವರ್ಷದ ಆರಂಭದಲ್ಲಿ ಸತತವಾಗಿ ಎರಡನೇ ಬಾರಿಗೆ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯದ ಆಡಳಿತವನ್ನು ಪಡೆದರು – 37 ವರ್ಷಗಳ ನಂತರ ಈ ಸಾಧನೆಯನ್ನು ಪುನರಾವರ್ತಿಸಲಾಯಿತು.
ಜಾತಿ ವಿಚಾರಕ್ಕೆ ಪತ್ನಿಯ ಕೊಲೆ ಆರೋಪ; ಬೇಗೂರು ಠಾಣೆಯ PSI ಬಂಧನ
ಶ್ರೇಯಾನಗರ ನಿವಾಸಿಗಳ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 14 =
Remember me
