ಕಡಪ:18ನೇ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಷ್ಟೇ ಬಾಕಿ. ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಿವೆ. ಆಂಧ್ರಪ್ರದೇಶದ ಆಡಳಿತರೂಢ ವೈಎಸ್​ಆರ್​ಸಿಪಿ ಪಕ್ಷವು ಲೋಕಸಭೆ ಮತ್ತು ವಿಧಾನಸಭೆ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್​ ಮಾಡಿದೆ.
ಇದನ್ನೂ ಓದಿ:ಚುನಾವಣಾ ಬಾಂಡ್ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಮೋದಿ ಅವರೇ ಉತ್ತರಿಸಿ ಎಂದ ಸಿದ್ದರಾಮಯ್ಯ
ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ ಎಲ್ಲಾ 25 ಲೋಕಸಭಾ ಕ್ಷೇತ್ರಗಳು ಮತ್ತು 175 ವಿಧಾನಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಕಡಪ ಜಿಲ್ಲೆಯ ಇಡುಪಲಪಾಯಿದಲ್ಲಿರುವ ಸಿಎಂ ಜಗನ್ ಮೋಹನ್​ ರೆಡ್ಡಿ ಅವರ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ್ ರೆಡ್ಡಿ ಅವರ ಸಮಾಧಿ ಬಳಿ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಪಟ್ಟಿಯನ್ನು ಬಿಡುಗಡೆ ಮಾಡಿದರು.
YSRCP releases a list of 25 candidates for Lok Sabha elections in Andhra Pradeshpic.twitter.com/kzTxruTfqI
— ANI (@ANI)March 16, 2024

ದೇಶ
ಬಾಪಟ್ಲ ಸಂಸದ ನಂದಿಗಂ ಸುರೇಶ್ ಅವರು ಲೋಕಸಭೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದರೆ, ಕಂದಾಯ ಸಚಿವ ಡಿ.ಪ್ರಸಾದ ರಾವ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಜಾತೀವಾರು ಲೆಕ್ಕಾಚಾರ:ವೈಎಸ್‌ಆರ್‌ಸಿಪಿ ಪಕ್ಷದ 32 ಹಾಲಿ ಶಾಸಕರು ಮತ್ತು 14 ಹಾಲಿ ಸಂಸದರಿಗೆ ಈ ಬಾರಿ ಟಿಕೆಟ್​ ನಿರಾಕರಿಸಲಾಗಿದೆ. ವೈಎಸ್‌ಆರ್‌ಸಿಪಿ ಪ್ರಕಟಿಸಿದ ಪಟ್ಟಿಯಲ್ಲಿ ಎಸ್‌ಸಿ-29, ಎಸ್‌ಟಿ-7 ಮತ್ತು ಬಿಸಿ-48 ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ವೈಎಸ್‌ಆರ್‌ಸಿಪಿ ಹೇಳಿದೆ. ವಿಧಾನಸಭೆಯಲ್ಲಿ 19 ಮಹಿಳೆಯರು ಹಾಗೂ 7 ಅಲ್ಪಸಂಖ್ಯಾತರು ಸ್ಪರ್ಧಿಸಲಿದ್ದಾರೆ.
ಆಂಧ್ರ ಪ್ರದೇಶದ ರಾಜಕೀಯ ಯಾವಾಗಲೂ ಹಾಟ್ ಆಗಿರುತ್ತೆ, ಈಗ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳು ಏಕಕಾಲದಲ್ಲಿ ನಡೆಯುವುದರಿಂದ ರಾಜಕೀಯ ಮತ್ತಷ್ಟು ಹಾಟ್​ ಆಗಿದೆ. ಚಂದ್ರಬಾಬು ನಾಯ್ಡು ಸಾರಥ್ಯದ ತೆಲುಗು ದೇಶಂ ಪಕ್ಷ, ಪವನ್ ಕಲ್ಯಾಣ್ ನೇತೃತ್ವದ ಜನ ಸೇನಾ ಪಕ್ಷದ ಜೊತೆಗೆ ಬಿಜೆಪಿ ಮೈತ್ರಿ ಬಹುತೇಕ ಖಚಿತವಾಗಿದೆ.
ಅಂಧ್ರ ಪ್ರದೇಶ ಮುಖ್ಯಮಂತ್ರಿ ವೈ. ಎಸ್. ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್‌ಸಿಪಿ ಪಕ್ಷವು ಆಂಧ್ರ ಪ್ರದೇಶದಲ್ಲಿ ಅಧಿಕಾರದಲ್ಲಿದೆ. 2019ರಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಆಂಧ್ರದಲ್ಲಿ ಭಾರೀ ಬಹುಮತ ಸಾಧಿಸಿತ್ತು. ಸಿಎಂ ಜಗನ್ ಅವರಿಗೆ ಅವರ ತಂಗಿ ಶರ್ಮಿಳಾ ಭರ್ಜರಿ ಟಕ್ಕರ್ ಕೊಡುವ ಸಾಧ್ಯತೆ ಇದೆ. ಆಂಧ್ರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ಶರ್ಮಿಳಾ ರೆಡ್ಡಿ ಅವರಿಗೆ ಸಿಕ್ಕಿರೋದು ಭಾರೀ ಸಂಚಲನ ಸೃಷ್ಟಿಸಿದೆ.
ಪಾಕ್‌ ಆಟಗಾರರು ಐಪಿಎಲ್‌ ಆಡ್ಬೇಕಂತೆ…! ಸಖತ್ ಟಾಂಗ್​ ಕೊಟ್ಟ ಹರ್ಭಜನ್‌ ಸಿಂಗ್‌

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − 14 =
Remember me
