ನವದೆಹಲಿ:ಟೀಂ ಇಂಡಿಯಾದ ಮಾಜಿ ಆಲ್‌ರೌಂಡರ್, 2011ರ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದು, ಈ ಬಾರಿ ನಡೆಯಲಿರುವ ಟಿ-20 ವಿಶ್ವಕಪ್​ನ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಇದು ಅವರ ಅಪಾರ ಅಭಿಮಾನಿ ಬಳಗಕ್ಕೆ ಅತೀವ ಸಂತಸ ಉಂಟುಮಾಡಿದೆ.
ಇದನ್ನೂ ಓದಿ:ಬೆಂ. ಗ್ರಾಮಾಂತರ ಮತದಾನ ಮುಕ್ತಾಯ
ಇತ್ತೀಚೆಗಷ್ಟೇ ವೆಸ್ಟ್ ಇಂಡೀಸ್​ನ ಮಾಜಿ ಆಟಗಾರ, ಸ್ಪೋಟಕ ಬ್ಯಾಟ್ಸ್​ಮನ್​ ಕ್ರಿಸ್ ಗೇಲ್ ಮತ್ತು ಒಲಂಪಿಕ್ ಚಿನ್ನದ ಪದಕ ವಿಜೇತ ಉಸೇನ್ ಬೋಲ್ಟ್ ಇಬ್ಬರು ಟಿ-20 ವಿಶ್ವಕಪ್ 2024ರ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದರು. ಇವರಿಬ್ಬರ ಬೆನ್ನಲ್ಲೇ ಇದೀಗ ಯುವರಾಜ್ ಸಿಂಗ್ ನೇಮಕಗೊಂಡಿದ್ದಾರೆ. ವಿಶ್ವಕಪ್​​ಗೆ ಸಂಬಂಧಿಸಿದಂತೆ ಮುಂಬರುವ ಎಲ್ಲಾ ಪ್ರಚಾರ ಕಾರ್ಯಕ್ರಮಗಳಲ್ಲಿ ಯುವಿ ಭಾಗವಹಿಸುವ ಹಿನ್ನೆಲೆ ಈ ಮಾಹಿತಿ ಇದೀಗ ಹೊರಬಿದ್ದಿದೆ.
2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಭಾರತ ಚೊಚ್ಚಲ ಟಿ-20 ವಿಶ್ವಕಪ್ ಟ್ರೋಫಿಯನ್ನು ಗೆದ್ದಿತು. ಈ ಗೆಲುವಿನಲ್ಲಿ ಯುವರಾಜ್ ಪ್ರಮುಖ ಪಾತ್ರ ವಹಿಸಿದ್ದರು. ಅಂದು 6 ಪಂದ್ಯಗಳಲ್ಲಿ ಕೇವಲ 148 ರನ್ ಗಳಿಸಿದ್ದ ಯುವಿ, 194.74 ಸ್ಟ್ರೈಕ್ ರೇಟ್ ಅನ್ನು ಉಳಿಸಿಕೊಂಡಿದ್ದರು. ಎಡಗೈ ಬ್ಯಾಟ್ಸ್​ಮನ್ ಆಗಿ ಡರ್ಬನ್‌ನಲ್ಲಿ ಇಂಗ್ಲೆಂಡ್‌ನ ವಿರುದ್ಧ ಕಣಕ್ಕಿಳಿದಿದ್ದ ಯುವರಾಜ್ ಸಿಂಗ್, ಸ್ಟುವರ್ಟ್ ಬ್ರಾಡ್ ಓವರ್​ನಲ್ಲಿ ಆರು ಬಾಲ್​ಗಳಿಗೆ ಆರು ಸಿಕ್ಸರ್​ ಸಿಡಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಿದರು.(ಏಜೆನ್ಸೀಸ್).
ನಿಮಗೆ ಏನೂ ಗೊತ್ತಿಲ್ಲ… RCB ಪ್ಲೇಆಫ್ ಕನಸು ಇನ್ನೂ ಜೀವಂತ: ವಿಲ್​ ಜ್ಯಾಕ್ಸ್​ ಬಿಚ್ಚಿಟ್ರು ಶಾಕಿಂಗ್ ಸಂಗತಿ

IPL 2024: RCB ವಿರುದ್ಧ ಸೋತರೂ ತಲೆತಗ್ಗಿಸದ ಸನ್‌ರೈಸರ್ಸ್! ಅದಕ್ಕೂ ಒಂದು ಕಾರಣವಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 13 =
Remember me
