ಕೂ ಕೂ ಎನುತಿದೆ ಬೆಳವಾ-ಬಂದು
 
ಕೂ ಕೂ ಎನುತಿದೆ ಬೆಳವಾ-ಬಂದು
ಹೊಕ್ಕಿತು ಭವವೆಂಬ ದುಖಃದ ಹಳುವ
 
ಪುರುಷನ ಬುಟ್ಟೀಲಿ ಇಟ್ಟು- ಬಹು
ಹರುಷದಿ ಹಳ್ಳದೂಳ್ ತೇಲಾಕ ಬಿಟ್ಟು
ಮನವೆಂಬ ಗೂಡಿನೊಳಿಟ್ಟು- ತನ್ನ
ತನುವೆಂಬ ಮರ್ಅದೊಳು ಹಾರಾಕ ಬಿಟ್ಟು
 
ಆನಂದದೊಳು ತಾನಿರಲು- ಸ್ವಾ
ನಂದಿ ರೆಖ್ಖೆಯ ಕೆದರುತಲಿರಲು,
ಜ್ನಾನದ ಬೆಳಕಿನೊಳಿಹುದು- ದೇವ
ಶಿಶುನಾಳಾಧೀಶ ಗೋವಿಂದನ ವರವು.
ನೋಡಿ
ಶರೀಫ ಸಾಹಿತ್ಯ
ಉಲ್ಲೇಖ
ಶಿಶುನಾಳ ಶರೀಫರ ಪದಗಳು -ಅನಾಮಿಕ
ವರ್ಗ: ದಾಸ ಸಾಹಿತ್ಯವರ್ಗ:ಕನ್ನಡ ಸಾಹಿತ್ಯ