ರಚನೆ: ಶ್ರೀ ಪುರಂದರದಾಸರು

ಗುರುವಿನ ಗುಲಾಮನಾಗುವ ತನಕ
ದೊರೆಯದಣ್ಣ ಮುಕುತಿ
ಪರಿ ಪರಿ ಶಾಸ್ತ್ರವನೋದಿದರೇನು
ವ್ಯರ್ಥವಾಯ್ತು ಭಕುತಿ

ಆರು ಶಾಸ್ತ್ರವ ಓದಿದರಿಲ್ಲ
ಮೂರು ಪುರಾಣವ ಮುಗಿಸಿದರಿಲ್ಲ
ಸಾರ ನ್ಯಾಯ ಕಥೆಗಳ ಕೇಳಿದರಿಲ್ಲ
ಧೀರನಾಗಿ ತಾ ಪೇಳಿದರಿಲ್ಲ

ಕೊರಳೊಳು ಮಾಲೆ ಧರಿಸಿದರಿಲ್ಲ,
ಬೆರಳೊಳು ಜಪಮಣಿ ಎಣಿಸಿದರಿಲ್ಲ
ಮರುಳನಾಗಿ ಶರೀರಕೆ ಬೂದಿ
ಒರೆಸಿಕೊಂಡು ತಾ ತಿರುಗಿದರಿಲ್ಲ

ನಾರಿಯ ಭೋಗ ಅಳಿಸಿದರಿಲ್ಲ
ಶಾರೀರಿಕ ಸುಖವ ಬಿಡಿಸಿದರಿಲ್ಲ
ನಾರದವರದ ಪುರಂದರ ವಿಠ್ಠಲನ
ಸೇರಿಕೊಂಡು ತಾ ಪಡೆಯುವ ತನಕ

ವರ್ಗ:ಪುರಂದರದಾಸ ಸಾಹಿತ್ಯ