ರಚನೆ: ಬಸವಣ್ಣ

ಮಡಕೆಯ ಮಾಡುವೊಡೆ ಮಣ್ಣೇ ಮೊದಲು, 
ತೊಡಿಗೆಯ ಮಾಡುವೊಡೆ ಹೊನ್ನೇ ಮೊದಲು, 
ಶಿವಪಥ ಅರಿವೊಡೆ ಗುರುಪಥ ಮೊದಲು, 
ಕೂಡಲಸಂಗಮ ದೇವರನರಿವೊಡೆ,
ಶರಣರ ಸಂಗವೇ ಮೊದಲು, ಮೊದಲು!!

ದಯವಿಲ್ಲದ ಧರ್ಮವಾವುದಯ್ಯಾ ? 
ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ 
ದಯವೇ ಧರ್ಮದ ಮೂಲವಯ್ಯೂ 
ಕೂಡಲಸಂಗಯ್ಯನಂತಲ್ಲದೊಲ್ಲನಯ್ಯೂ !! 

ತನಗೆ ಮುನಿವವರಿಗೆ ತಾ ಮುನಿಯಲೇಕಯ್ಯಾ? 
ತನಗಾದ ಆಗೇನು? ಅವರಿಗಾದ ಚೇಗೇನು? 
ತನುವಿನ ಕೋಪ ತನ್ನ ಹಿರಿಯತನದ ಕೇಡು? 
ಮನದಾ ಕೋಪ ತನ್ನರಿವಿನಾ ಕೇಡು 
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ 
ನೆರೆಮನೆಯ ಸುಡದು ಕೂಡಲಸಂಗಮದೇವಾ !!

ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ! 
ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ! 
ಕೂಟಕ್ಕೆ ಸ್ರೀಯಾಗಿ ಕೂಡಿದಳು ಮಾಯೆ! 
ಇದಾವ ಪರಿಯಲ್ಲಿ ಕಾಡಿತ್ತು ಮಾಯೆ? 
ಈ ಮಾಯೆಯ ಕಳವೊಡೆ ಎನ್ನಳವಲ್ಲ; 
ನೀವೇ ಬಲ್ಲಿರಿ ಕೂಡಲಸಂಗಮದೇವಾ!!

ನೆಲವೊಂದೆ ಹೊಲೆಗೇರಿ ಶಿವಾಲಯಕ್ಕೆ 
ಜಲವೊಂದೆ ಶೌಚಾಚಮನಕ್ಕೆ 
ಕುಲವೊಂದೆ ತನ್ನ ತಾನರಿದವಂಗೆ 
ಫಲವೊಂದೆ ಷಡುದರುಶನ ಮುಕ್ತಿಗೆ 
ನಿಲವೊಂದೆ ಕೂಡಲಸಂಗಮದೇವಾ ನಿಮ್ಮನರಿದವಂಗೆ !!

ತನು ನಿಮ್ಮದೆಂದ ಬಳಿಕ ಎನಗೆ ಬೇರೆ ತನುವಿಲ್ಲ 
ಮನ ನಿಮ್ಮದೆಂದ ಬಳಿಕ ಬೇರೆ ಮನವಿಲ್ಲ 
ಧನ ನಿಮ್ಮದೆಂದ ಬಳಿಕ ಎನಗೆ ಬೇರೆ ಧನವಿಲ್ಲ 
ಇಂತೀ ತ್ರಿವಿಧವೂ ನಿಮ್ಮದೆಂದರಿದ ಬಳಿಕ ಎನಗೆ ಬೇರೆ 
ವಿಚಾರವುಂಟೆ ಕೂಡಲಸಂಗಮದೇವಾ!!

ತಂದೆ ನೀನು ತಾಯಿ ನೀನು 
ಬಂಧು ನೀನು ಬಳಗ ನೀನು 
ನೀನಲ್ಲದೆ ಮತ್ತಾರೂ ಇಲ್ಲವಯ್ಯಾ 
ಕೂಡಲಸಂಗಮದೇವಾ 
ಹಾಲಲ್ಲದ್ದು ನೀರಲ್ಲದ್ದು ನಿಮ್ಮ ಧರ್ಮ!!

ele ele mAnva aliyase bedvu 
kada beladinglu siri sthirvalla 
kedilada padviyneeva mareyade 
poojiso namma kudala sangama devana

Category:ವಚನ ಸಾಹಿತ್ಯ
Category:ಬಸವಣ್ಣನವರ ವಚನಗಳು