ಬಾಂಗ್ಲಾದೇಶದ ಹಿಂಸಾಚಾರ: ಸರ್ವಪಕ್ಷದ ಸಭೆಯಲ್ಲಿ ರಾಹುಲ್ ಗಾಂಧಿ ಕೇಳಿದ ಆ ಮೂರು ಪ್ರಶ್ನೆಗಳು...! ಬಾಂಗ್ಲಾದೇಶದಲ್ಲಿನ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಶೇಖ್ ಹಸೀನಾ ಪ್ರಧಾನಿ ಹುದ್ದೆಯಿಂದ ಕೆಳಗೆ ಇಳಿದ ನಂತರ ಅಲ್ಲಿನ ಪರಿಸ್ಥಿತಿಯ ಕುರಿತು ಚರ್ಚಿಸಲು ಕರೆದ ಸರ್ವಪಕ್ಷಗಳ ಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಮೂರು ಪ್ರಮುಖ ಪ್ರಶ್ನೆಗಳನ್ನು ಕೇಳಿದ್ದಾರೆ. ನವದೆಹಲಿ:ಬಾಂಗ್ಲಾದೇಶದಲ್ಲಿನ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಶೇಖ್ ಹಸೀನಾ ಪ್ರಧಾನಿ ಹುದ್ದೆಯಿಂದ ಕೆಳಗೆ ಇಳಿದ ನಂತರ ಅಲ್ಲಿನ ಪರಿಸ್ಥಿತಿಯ ಕುರಿತು ಚರ್ಚಿಸಲು ಕರೆದ ಸರ್ವಪಕ್ಷಗಳ ಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಮೂರು ಪ್ರಮುಖ ಪ್ರಶ್ನೆಗಳನ್ನು ಕೇಳಿದ್ದಾರೆ. ಅದರಲ್ಲಿ ಪ್ರಮುಖವಾಗಿ .ಢಾಕಾದಲ್ಲಿನ ಅಧಿಕಾರ ಬದಲಾವಣೆಯ ರಾಜತಾಂತ್ರಿಕ ಪರಿಣಾಮಗಳನ್ನು ಎದುರಿಸಲು ಸರ್ಕಾರದ ಅಲ್ಪಾವಧಿಯ ಮತ್ತು ದೀರ್ಘಾವಧಿಯ ಕಾರ್ಯತಂತ್ರ ಏನು? ಎನ್ನುವುದು ಅವರ ಮೊದಲ ಪ್ರಶ್ನೆಯಾಗಿದೆ. ಇದಕ್ಕೆ ಉತ್ತರಿಸಿದ ವಿದೇಶಾಂಗ ಸಚಿವ ಜೈಶಂಕರ್ ಇದು ಅಭಿವೃದ್ಧಿ ಹೊಂದುತ್ತಿರುವ ಪರಿಸ್ಥಿತಿಯಾಗಿದ್ದು, ಕೇಂದ್ರವು ತನ್ನ ಮುಂದಿನ ನಡೆಯನ್ನು ಉತ್ತಮಗೊಳಿಸಲು ಅದನ್ನು ಸೂಕ್ಷ್ಮವಾಗಿ ವಿಶ್ಲೇಷಿಸುತ್ತಿದೆ ಎಂದು ಉತ್ತರಿಸಿದರು. ಇನ್ನೂ ಎರಡನೇ ಪ್ರಶ್ನೆಯಾಗಿ ಕಳೆದ ಕೆಲವು ವಾರಗಳಲ್ಲಿ ಢಾಕಾದಲ್ಲಿ ನಡೆದ ನಾಟಕೀಯ ಬೆಳವಣಿಗೆಯ ಹಿಂದೆ ಪಾಕಿಸ್ತಾನದ ಪಾತ್ರ ಇರಬಹುದೇ ಎಂದು ಅವರು ಕೇಳಿದರು. ಇದಕ್ಕೆ ಉತ್ತರಿಸಿದ ಸಚಿವರು ಈ ನಿಟ್ಟಿನಲ್ಲಿ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.ಬಾಂಗ್ಲಾದೇಶದಲ್ಲಿನ ಘಟನೆಗಳ ನಾಟಕೀಯ ತಿರುವನ್ನು ಸರ್ಕಾರ ಗಮನಿಸುತ್ತಿರುವು ಬಗ್ಗೆ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವ ಜೈ ಶಂಕರ್ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದರು.ನೆರೆಹೊರೆಯ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ನರೇಂದ್ರ ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ತಮ್ಮ ಸಂಪೂರ್ಣ ಬೆಂಬಲವನ್ನು ನೀಡಿವೆ. ಇದನ್ನೂ ಓದಿ: ಸಭೆಯ ನಂತರ, ವಿದೇಶಾಂಗ ಸಚಿವ ಜೈಶಂಕರ್ ಅವರು ಪ್ರತಿಪಕ್ಷಗಳ ಒಮ್ಮತದ ಬೆಂಬಲವನ್ನು ಶ್ಲಾಘಿಸಿದರು. "ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಇಂದು ಸಂಸತ್ತಿನಲ್ಲಿ ನಡೆದ ಸರ್ವಪಕ್ಷ ಸಭೆಗೆ ಸಂಕ್ಷಿಪ್ತವಾಗಿ ವಿವರಿಸಲಾಗಿದೆ. ವಿಸ್ತೃತವಾದ ಒಮ್ಮತದ ಬೆಂಬಲ ಮತ್ತು ತಿಳುವಳಿಕೆಯನ್ನು ಶ್ಲಾಘಿಸುತ್ತೇನೆ" ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಹಸೀನಾ ಇನ್ನೂ ಭಾರತದಲ್ಲಿದ್ದು, ರಾಜಕೀಯ ಆಶ್ರಯಕ್ಕಾಗಿ ಯುಕೆಗೆ ತೆರಳುವ ಸಾಧ್ಯತೆ ಇದೆ. ನವದೆಹಲಿಯ ಹಳೆಯ ಸ್ನೇಹಿತೆ ಎಂದು ಕರೆಯಲ್ಪಡುವ ಹಸೀನಾಗೆ ಹೇಗೆ ಪ್ರತಿಕ್ರಿಯಿಸಲು ಯೋಜಿಸಲಾಗಿದೆ ಎಂಬುದನ್ನು ಕೇಂದ್ರವು ಸರ್ವಪಕ್ಷ ಸಭೆಗೆ ತಿಳಿಸಿದೆ. ತನ್ನ ಮುಂದಿನ ಕ್ರಮವನ್ನು ನಿರ್ಧರಿಸಲು ಆಕೆಗೆ ಸಮಯ ನೀಡಲು ಹೊಸದಿಲ್ಲಿ ಬಯಸಿದೆ ಎಂದು ಮೂಲಗಳು ತಿಳಿಸಿವೆ. ಮಧ್ಯಂತರ ಸರ್ಕಾರ ರಚನೆಯನ್ನು ಘೋಷಿಸಿರುವ ಬಾಂಗ್ಲಾದೇಶ ಸೇನೆಯೊಂದಿಗೆ ಸಂಪರ್ಕದಲ್ಲಿದೆ ಎಂದು ಸರ್ಕಾರ ಸಭೆಗೆ ತಿಳಿಸಿದೆ. ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ವಿರೋಧ ಪಕ್ಷಗಳಿಗೆ ತಿಳಿಸಿದೆ. ಬಾಂಗ್ಲಾದೇಶದಲ್ಲಿ ಸುಮಾರು 20,000 ಭಾರತೀಯರಿದ್ದಾರೆ ಮತ್ತು ಸುಮಾರು 8,000 ಜನರು ಮರಳಿದ್ದಾರೆ. ಸರ್ಕಾರ ಅವರೊಂದಿಗೆ ಸಂಪರ್ಕದಲ್ಲಿದ್ದು, ಹೈಕಮಿಷನ್ ಕಾರ್ಯನಿರ್ವಹಿಸುತ್ತಿದೆ. ಕೇಂದ್ರವು, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಯ ವರದಿಗಳನ್ನು ಸಹ ಪತ್ತೆಹಚ್ಚುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಭೆಯ ನಂತರ ಮಾತನಾಡಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ, ಬಾಂಗ್ಲಾದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಗಡಿಗಳಲ್ಲಿನ ಪರಿಸ್ಥಿತಿ ಭಾರತದ ಪ್ರಾಥಮಿಕ ಕಾಳಜಿಯಾಗಿದೆ ಎಂದು ಹೇಳಿದರು. ಸರ್ಕಾರವು ಪರಿಸ್ಥಿತಿಯನ್ನು ನಿಭಾಯಿಸುತ್ತಿರುವ ರೀತಿಯಿಂದ ಪ್ರತಿಪಕ್ಷಗಳು ತೃಪ್ತರಾಗಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, "ವಿದೇಶಾಂಗ ವ್ಯವಹಾರಗಳ ಸಚಿವರು ಎಲ್ಲಾ ಪಕ್ಷದ ನಾಯಕರಿಗೆ ಮಾಹಿತಿ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ನಾವು ಸರ್ಕಾರದ ಜೊತೆಗಿದ್ದೇವೆ' ಎಂದು ಹೇಳಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...