2024: ಕಾಂಗ್ರೆಸ್ ಪಕ್ಷ 100 ಸೀಟು ಗೆದ್ದಲ್ಲಿ ಬಿಜೆಪಿಗೆ ಎದುರಾಗಲಿದೆ ಕಂಟಕ...! ರೇವಂತ್ ರೆಡ್ಡಿ ಅವರ ವಿಶ್ಲೇಷಣೆ ಪ್ರಕಾರ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ತಮ್ಮ ಪಕ್ಷಕ್ಕೆ ಕೇವಲ 125 ಸ್ಥಾನಗಳು ಬೇಕಾಗುತ್ತದೆ ಎನ್ನುತ್ತಾರೆ. ಇನ್ನೊಂದೆಡೆಗೆ ಬಿಜೆಪಿ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲು ಕನಿಷ್ಠ 240-250 ಸ್ಥಾನಗಳನ್ನು ಗೆಲ್ಲಬೇಕು. ಆದ್ದರಿಂದ ಈ ಹಿನ್ನೆಲೆಯಲ್ಲಿ ರೇವಂತ್ ರೆಡ್ಡಿ ಅವರ ಹೇಳಿಕೆಯನ್ನು ನಾವು ಸ್ವಲ್ಪ ವಿಭಿನ್ನ ದೃಷ್ಟಿಕೋನದಿಂದ ಅರ್ಥೈಸಿಕೊಳ್ಳಬೇಕು. ಈ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400 ದಾಟುವ ಗುರಿಯನ್ನು ಸಾಧಿಸಬಹುದೇ ಎಂಬುದು ಈ ಬಾರಿಯ ಬಹು ದೊಡ್ಡ ಪ್ರಶ್ನೆ. ಈ ಪ್ರಶ್ನೆಗೆ ಉತ್ತರವಾಗಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಕೆಲವು ತಿಂಗಳ ಹಿಂದೆ ಕುತೂಹಲಕಾರಿ ಲೆಕ್ಕಾಚಾರವನ್ನು ಹೇಳಿದ್ದರು. ಬಿಜೆಪಿಯ ಸಂಭವನೀಯ ಲೆಕ್ಕಾಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಅವರು ವಿಭಿನ್ನ ರೀತಿಯಲ್ಲಿ ಉತ್ತರವನ್ನು ನೀಡಿದ್ದಾರೆ. ರೇವಂತ್ ರೆಡ್ಡಿ ಅವರ ವಿಶ್ಲೇಷಣೆ ಪ್ರಕಾರ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ತಮ್ಮ ಪಕ್ಷಕ್ಕೆ ಕೇವಲ 125 ಸ್ಥಾನಗಳು ಬೇಕಾಗುತ್ತದೆ ಎನ್ನುತ್ತಾರೆ. ಇನ್ನೊಂದೆಡೆಗೆ ಬಿಜೆಪಿ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲು ಕನಿಷ್ಠ 240-250 ಸ್ಥಾನಗಳನ್ನು ಗೆಲ್ಲಬೇಕು. ಆದ್ದರಿಂದ ಈ ಹಿನ್ನೆಲೆಯಲ್ಲಿ ರೇವಂತ್ ರೆಡ್ಡಿ ಅವರ ಹೇಳಿಕೆಯನ್ನು ನಾವು ಸ್ವಲ್ಪ ವಿಭಿನ್ನ ದೃಷ್ಟಿಕೋನದಿಂದ ಅರ್ಥೈಸಿಕೊಳ್ಳಬೇಕು. ಇದನ್ನೂ ಓದಿ: ಬಿಜೆಪಿ ಕಾಂಗ್ರೆಸ್ 2019 ರ ಚುನಾವಣೆಯಲ್ಲಿ 138 ಸ್ಥಾನಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಇತ್ತು. ಈ ಪೈಕಿ ಬಿಜೆಪಿ 133 ಸ್ಥಾನಗಳನ್ನು ಗೆದ್ದಿದೆ. 2014 ರ ಚುನಾವಣೆಯಲ್ಲಿ ಬಿಜೆಪಿ 121 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಇದರರ್ಥ ಕಾಂಗ್ರೆಸ್ ವಿರುದ್ಧದ ನೇರ ಹೋರಾಟದಲ್ಲಿ ಬಿಜೆಪಿ ಗರಿಷ್ಠ ಸ್ಥಾನಗಳನ್ನು ಗೆದ್ದಿದೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಕಾಂಗ್ರೆಸ್ ವಿರುದ್ಧ ನೇರ ಸ್ಪರ್ಧೆಯಲ್ಲಿ ಬಿಜೆಪಿ 92 ರಷ್ಟು ಸ್ಥಾನಗಳನ್ನು ಗೆದ್ದಿದೆ.ರೇವಂತ್ ರೆಡ್ಡಿ ಅವರು ಈ ಬಾರಿ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿಗೆ ಇದಕ್ಕಿಂತ ಹೆಚ್ಚಿನ ಸ್ಥಾನ ಬರುವುದಿಲ್ಲ ಎನ್ನುತ್ತಾರೆ. ರಾಜ್ಯವಾರು ಸಾಧನೆಗಳನ್ನು ಗಮನಿಸಿದರೆ ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ರಾಜಸ್ಥಾನ, ಛತ್ತೀಸ್‌ಗಢ, ಜಾರ್ಖಂಡ್, ಹಿಮಾಚಲ, ಉತ್ತರಾಖಂಡ, ಮಹಾರಾಷ್ಟ್ರ, ಗುಜರಾತ್, ಗೋವಾ, ಕರ್ನಾಟಕ ಹೀಗೆ ಕಾಂಗ್ರೆಸ್ ಒಟ್ಟು 241 ಸ್ಥಾನಗಳಲ್ಲಿ ಕಳೆದ ಬಾರಿ 9 ಸ್ಥಾನಗಳನ್ನು ಗೆಲುವು ಸಾಧಿಸಿತ್ತು. ಇದರರ್ಥ ಕಾಂಗ್ರೆಸ್ ಇದಕ್ಕಿಂತ ಕಳಪೆ ಸಾಧನೆ ಮಾಡಲು ಸಾಧ್ಯವಿಲ್ಲ. ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರವು ಈ ಬಾರಿ ಈ ರಾಜ್ಯಗಳಲ್ಲಿ ಕಾಂಗ್ರೆಸ್ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರಲ್ಲಿ ನಿಂತಿದೆ.ಅಂದರೆ, ಈ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕ್ಷಮತೆ ಹೆಚ್ಚಾದಷ್ಟೂ ಬಿಜೆಪಿ ಹೆಚ್ಚು ಸ್ಥಾನಗಳನ್ನು ಕಳೆದುಕೊಳ್ಳುತ್ತದೆ. ಇದರರ್ಥ ಕಾಂಗ್ರೆಸ್ ತನ್ನ ಪ್ರಸ್ತುತ 52 ಲೋಕಸಭಾ ಸ್ಥಾನಗಳಿಗಿಂತ 30 ಹೆಚ್ಚು ಸ್ಥಾನಗಳನ್ನು ಗೆದ್ದರೆ, ಅದು ಬಿಜೆಪಿಯ ಬಹುಮತವನ್ನು 272 ಕ್ಕಿಂತ ಕಡಿಮೆ ಮಾಡುತ್ತದೆ. ಪ್ರಸ್ತುತ ಲೋಕಸಭೆಯಲ್ಲಿ ಬಿಜೆಪಿ 303 ಸ್ಥಾನಗಳನ್ನು ಹೊಂದಿದೆ. ಅದೇ ರೀತಿ ಕಾಂಗ್ರೆಸ್ 100 ಸ್ಥಾನ ಗಳಿಸಿದರೆ ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ ಉಂಟಾಗಲಿದೆ ಕರ್ನಾಟಕ ಮತ್ತು ತೆಲಂಗಾಣ: ಕಳೆದ ಬಾರಿ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ 28 ಮತ್ತು 17 ಸ್ಥಾನಗಳಲ್ಲಿ ಕ್ರಮವಾಗಿ ಒಂದು ಮತ್ತು ಮೂರು ಸ್ಥಾನಗಳನ್ನು ಮಾತ್ರ ಪಡೆದಿತ್ತು. ಸದ್ಯ ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಅಂದರೆ ಈ ರಾಜ್ಯಗಳಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ನೀಡಿದರೆ ಇಲ್ಲಿ ಬಿಜೆಪಿ ಮೇಲೆ ನೇರವಾಗಿ ಪರಿಣಾಮ ಬೀರಲಿದೆ. ಮಹಾರಾಷ್ಟ್ರ: ಕಳೆದ ಬಾರಿ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನೇತೃತ್ವದಲ್ಲಿ ಎನ್‌ಡಿಎ 48ರಲ್ಲಿ 41 ಸ್ಥಾನಗಳನ್ನು ಪಡೆದಿತ್ತು. ಅಂದಿನಿಂದ ಅಲ್ಲಿನ ರಾಜಕೀಯ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಎರಡು ಪ್ರಮುಖ ಪ್ರಾದೇಶಿಕ ಪಕ್ಷಗಳಾದ ಶಿವಸೇನೆ ಮತ್ತು ಎನ್‌ಸಿಪಿ ನಡುವೆ ಬಿರುಕು ಉಂಟಾಗಿದ್ದು, ರಾಜ್ಯದಲ್ಲಿ ಬಿಜೆಪಿ ಜೊತೆಗೆ ಬಂಡಾಯ ಬಣ ಅಧಿಕಾರದಲ್ಲಿದೆ.ಇತ್ತೀಚಿನ ವರ್ಷಗಳಲ್ಲಿ ಈ ರಾಜ್ಯದಲ್ಲಿ ಹಲವು ಪ್ರಮುಖ ರಾಜಕೀಯ ಮೇಲಾಟಗಳು ನಡೆದಿದ್ದು. ಈ ರಾಜ್ಯದಲ್ಲಿ ಹಿಂದಿನ ಸಾಧನೆಯನ್ನು ಪುನರಾವರ್ತಿಸುವುದು ಬಿಜೆಪಿಯ ಮುಂದಿರುವ ದೊಡ್ಡ ಸವಾಲಾಗಿದೆ.ಏಕೆಂದರೆ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ಮೈತ್ರಿಕೂಟದ ಬೆಂಬಲ ಇರುವುದರಿಂದ ಇದು ವರವಾಗಿ ಪರಿಣಮಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಬಿಹಾರ 2019 ರ ಲೋಕಸಭಾ ಚುನಾವಣೆಯಲ್ಲಿ, ಎನ್‌ಡಿಎ 40 ರಲ್ಲಿ 39 ಸ್ಥಾನಗಳನ್ನು ಗಳಿಸಿತು ಮತ್ತು ಶೇಕಡಾ 54 ರಷ್ಟು ಮತಗಳನ್ನು ಗಳಿಸಿತು. ಆದರೆ ಆ ನಂತರ ಬಿಹಾರದ ರಾಜಕೀಯದಲ್ಲಿ ಸಾಕಷ್ಟು ಧ್ರುವೀಕರಣವಾಗಿದೆ.ನಿತೀಶ್ ಕುಮಾರ್ ಅವರು ಆರ್ ಜೆಡಿ ತೊರೆದು ಮತ್ತೆ ಎನ್ಡಿಎ ಪಾಳಯಕ್ಕೆ ಬರುತ್ತಿರುವುದು ವಿಶ್ವಾಸಾರ್ಹತೆಯ ಪ್ರಶ್ನೆಯನ್ನು ಹುಟ್ಟುಹಾಕಿದ್ದಲ್ಲದೆ ಮತದಾರರನ್ನು ಗೊಂದಲಕ್ಕೀಡು ಮಾಡಿದೆ. ಇದರಿಂದಾಗಿ ಜೆಡಿಯುನ ಅತ್ಯಂತ ಹಿಂದುಳಿದ ಮತಬ್ಯಾಂಕ್ ಚದುರಿಹೋಗುವ ಅಪಾಯ ಹೆಚ್ಚಿದೆ. ಇದು ಮಾತ್ರವಲ್ಲದೆ, ಬಿಹಾರದ ಒಟ್ಟು 7.64 ಕೋಟಿ ಮತದಾರರಲ್ಲಿ 1.6 ಕೋಟಿ ಮತದಾರರು ಯುವಕರಾಗಿರುವುದರಿಂದ (20-29 ವಯಸ್ಸಿನವರು) ಅವರಿಗೆ ಉದ್ಯೋಗದ ಬಿಕ್ಕಟ್ಟು ದೊಡ್ಡ ಸಮಸ್ಯೆಯಾಗಿದೆ. ವಿಶ್ಲೇಷಕರ ಪ್ರಕಾರ, ಈ ಕಾರಣಗಳಿಂದಾಗಿ ಬಿಜೆಪಿ ತನ್ನ ಹಿಂದಿನ ಪ್ರದರ್ಶನವನ್ನು ಪುನರಾವರ್ತಿಸುವ ಸವಾಲು ಎದುರಿಸುತ್ತಿದೆ. ಎಎಪಿ ಜೊತೆ ಮೈತ್ರಿ: ಈ ಬಾರಿ ದೆಹಲಿ ಮತ್ತು ಪಂಜಾಬ್ ನಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ಮೈತ್ರಿ ಇದೆ. ಹರಿಯಾಣ, ದೆಹಲಿ, ಚಂಡೀಗಢ ಮತ್ತು ಹಿಮಾಚಲ ಪ್ರದೇಶಗಳ ಜೊತೆಗೆ ಈ ರಾಜ್ಯಗಳನ್ನು ನೋಡುವುದಾದರೆ, ಕಳೆದ ಬಾರಿ ಕಾಂಗ್ರೆಸ್ ಈ ಎಲ್ಲ ಕ್ಷೇತ್ರಗಳಲ್ಲಿ ಕೇವಲ ಒಂದು ಸ್ಥಾನವನ್ನು ಮಾತ್ರ ಪಡೆದಿತ್ತು. ಹಾಗಾಗಿ ಈ ಬಾರಿ ಇಲ್ಲಿ ಕಾಂಗ್ರೆಸ್ ಗೆ ಲಾಭವಾದರೂ ನೇರ ನಷ್ಟ ಬಿಜೆಪಿಗೆ ಮಾತ್ರ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...