: ಕಾಂಗ್ರೆಸ್‌ನೊಂದಿಗೆ ವಿಲೀನವಾಗುವುದೇ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಪಾರ್ಟಿ..? ಮಹಾರಾಷ್ಟ್ರದಲ್ಲಿ ಈಗ ಎನ್ಸಿಪಿ ಪಕ್ಷದ ನಾಯಕ ಶರದ್ ಪವಾರ್ ಕಾಂಗ್ರೆಸ್ ಮತ್ತು ಪ್ರಾದೇಶಿಕ ಪಕ್ಷಗಳ ಕುರಿತಾಗಿ ನೀಡಿರುವ ಹೇಳಿಕೆ ಈಗ ಬಾರಿ ಚರ್ಚೆಗೆ ಗ್ರಾಸವಾಗಿದೆ. ನವದೆಹಲಿ:ಮಹಾರಾಷ್ಟ್ರದಲ್ಲಿ ಈಗ ಎನ್ಸಿಪಿ ಪಕ್ಷದ ನಾಯಕ ಶರದ್ ಪವಾರ್ ಕಾಂಗ್ರೆಸ್ ಮತ್ತು ಪ್ರಾದೇಶಿಕ ಪಕ್ಷಗಳ ಕುರಿತಾಗಿ ನೀಡಿರುವ ಹೇಳಿಕೆ ಈಗ ಬಾರಿ ಚರ್ಚೆಗೆ ಗ್ರಾಸವಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್‌ನಲ್ಲಿದ್ದ ಪವಾರ್, ಮುಂದಿನ ಕೆಲವು ವರ್ಷಗಳಲ್ಲಿ ದೇಶದ ಹಲವು ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್‌ನೊಂದಿಗೆ ಹೆಚ್ಚು ನಿಕಟ ಸಂಬಂಧ ಹೊಂದುವ ಸಾಧ್ಯತೆಯನ್ನು ವ್ಯಕ್ತಪಡಿಸಿದ್ದಾರೆ ಅಥವಾ ಅದರೊಂದಿಗೆ ವಿಲೀನಗೊಳಿಸುವ ಆಯ್ಕೆಯನ್ನು ಪರಿಗಣಿಸಬಹುದು.ಈ ಸಾಧ್ಯತೆಯನ್ನು ಶರದ್ ಪವಾರ್ ಗುಂಪು ಮತ್ತು ಉದ್ಧವ್ ಠಾಕ್ರೆ ಬಣಗಳಿಗೆ ಅನ್ವಯಿಸಲಾಗುತ್ತಿದೆ.ಪವಾರ್ ಅವರು ಎನ್‌ಸಿಪಿಯ ತಮ್ಮ ಬಣವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಬಹುದು ಎಂಬ ಊಹಾಪೋಹವಿದೆ. ಆದರೆ, ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಏಕಾಏಕಿ ಪವಾರ್ ವಿಲೀನದ ಬಗ್ಗೆ ಯೋಚಿಸಿದ್ದೇಕೆ? ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ನಡೆದಿದೆ. ಇದನ್ನೂ ಓದಿ: ಈಗ ಈ ಕುರಿತಾಗಿ ಪ್ರತಿಕ್ರಿಯಿಸಿರುವ ಶಿವಸೇನೆಯ ಉದ್ದವ್ ಠಾಕ್ರೆ ತಮ್ಮ ಪಕ್ಷ ಸಣ್ಣದಲ್ಲ ಹಾಗಾಗಿ ಬೇರೆ ಯಾವುದೇ ಪಕ್ಷದೊಂದಿಗೆ ವೀಲಿನವಾಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಸದ್ಯ ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಇಬ್ಬರ ಪಕ್ಷವು ಎರಡು ಭಾಗಗಳಾಗಿ ವಿಭಜನೆಯಾಗಿದೆ ಮತ್ತು ಈಗ ಅವರು ಕೇವಲ ಒಂದು ಗುಂಪನ್ನು ಪ್ರತಿನಿಧಿಸುತ್ತಿದ್ದಾರೆ.ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಧ್ಯಕ್ಷ ಶರದ್ ಪವಾರ್ ಆಂಗ್ಲ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿರುವುದು ರಾಜಕೀಯ ವಲಯದಲ್ಲಿ ಹಲವು ರೀತಿಯಲ್ಲಿ ವ್ಯಾಖ್ಯಾನಿಸಲಾಗುತ್ತಿದೆ. ಈಗ ಕುರಿತಾಗಿ ಪ್ರತಿಕ್ರಿಯಿಸುತ್ತಾ ಅವರು ತಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿದ್ದಾರೆಯೇ? ಎಂಬುದನ್ನು ಪವಾರ್ ಸ್ಪಷ್ಟಪಡಿಸಬೇಕು ಎಂದು ಸಂಜಯ್ ರಾವತ್ ಹೇಳಿದರು. ಈ ಕುರಿತಾಗಿ ವ್ಯಂಗ್ಯವಾಡಿದ ಫಡ್ನವೀಸ್ 'ಶರದ್ ಪವಾರ್ ಅವರು ಪ್ರಾದೇಶಿಕ ಪಕ್ಷಗಳನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವ ಸಾಧ್ಯತೆಯ ಕುರಿತು ಹೇಳಿಕೆಗಳು ತಮ್ಮ ಪಕ್ಷವನ್ನು ನಿರ್ವಹಿಸುವುದು ಅವರಿಗೆ ಕಷ್ಟಕರವಾಗಿದೆ ಎಂದು ತೋರಿಸುತ್ತದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಮತ್ತೊಂದೆಡೆ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಉದ್ಧವ್ ಠಾಕ್ರೆ ಅವರನ್ನು ಗುರಿಯಾಗಿಸಿ ಈಗಾಗಲೇ ಕಾಂಗ್ರೆಸ್‌ನಂತಾಗಿದ್ದಾರೆ ಎಂದು ಶಿಂಧೆ ಹೇಳಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...