ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹುದ್ದೆಯ ರೇಸ್ ನಲ್ಲಿವೆ ಈ ಅಚ್ಚರಿಯ ಹೆಸರುಗಳು..! ಇದೀಗ ನಡ್ಡಾ ಅವರು ಒಂದೊಂದು ಹುದ್ದೆಯನ್ನು ಅಲಂಕರಿಸುವ ಪಕ್ಷದ ನೀತಿಯ ಪ್ರಕಾರ ರಾಜೀನಾಮೆ ನೀಡಲು ಮುಂದಾಗಿದ್ದು, ಬಿಜೆಪಿಯ ನೂತನ ಅಧ್ಯಕ್ಷರ ಆಯ್ಕೆಯಲ್ಲಿ ಈಗ ಹಲವಾರು ಹೆಸರುಗಳು ಕೇಳಿ ಬರುತ್ತಿವೆ.ಇತ್ತೀಚೆಗಷ್ಟೇ ಮುಕ್ತಾಯಗೊಂಡ ಲೋಕಸಭೆಯಲ್ಲಿ ಹಿನ್ನಡೆ ಅನುಭವಿಸಿರುವ ಉತ್ತರದ ರಾಜ್ಯಗಳಲ್ಲಿ ಬಿಜೆಪಿ ಈಗ ತನ್ನ ಸಂಘಟನೆಯ ಬಲವನ್ನು ಹೆಚ್ಚಿಸಿಕೊಂಡಿರುವುದರಿಂದ ಅಮಿತ್ ಶಾ ಅವರು ಅಧ್ಯಕ್ಷ ಸ್ಥಾನಕ್ಕೆ ಮರಳಬಹುದು ನವದೆಹಲಿ:ರಾಜ್ಯಸಭಾ ಸಂಸದರಾಗಿರುವ ಜೆಪಿ ನಡ್ಡಾ ಅವರು ನರೇಂದ್ರ ಮೋದಿ ಸಂಪುಟಕ್ಕೆ ಸೇರ್ಪಡೆಗೊಂಡ ನಂತರ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.ನಡ್ಡಾ ಅವರು ಈ ಹಿಂದೆ 2014-2019ರ ಅವಧಿಯಲ್ಲಿ ಮೋದಿ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಆದರೆ, ಅಮಿತ್ ಶಾ ಅವರು ಆ ಸ್ಥಾನವನ್ನು ಬಿಟ್ಟುಕೊಟ್ಟ ನಂತರ ಅವರು ಪಕ್ಷದ ಚುಕ್ಕಾಣಿ ಹಿಡಿದರು. ಇದನ್ನೂ ಓದಿ: ಇದೀಗ ನಡ್ಡಾ ಅವರು ಒಂದೇ ಹುದ್ದೆಯನ್ನು ಅಲಂಕರಿಸುವ ಪಕ್ಷದ ನೀತಿಯ ಪ್ರಕಾರ ರಾಜೀನಾಮೆ ನೀಡಲು ಮುಂದಾಗಿದ್ದು, ಬಿಜೆಪಿಯ ನೂತನ ಅಧ್ಯಕ್ಷರ ಆಯ್ಕೆಯಲ್ಲಿ ಈಗ ಹಲವಾರು ಹೆಸರುಗಳು ಕೇಳಿ ಬರುತ್ತಿವೆ.ಇತ್ತೀಚೆಗಷ್ಟೇ ಮುಕ್ತಾಯಗೊಂಡ ಲೋಕಸಭೆಯಲ್ಲಿ ಹಿನ್ನಡೆ ಅನುಭವಿಸಿರುವ ಉತ್ತರದ ರಾಜ್ಯಗಳಲ್ಲಿ ಬಿಜೆಪಿ ಈಗ ತನ್ನ ಸಂಘಟನೆಯ ಬಲವನ್ನು ಹೆಚ್ಚಿಸಿಕೊಂಡಿರುವುದರಿಂದಅವರು ಅಧ್ಯಕ್ಷ ಸ್ಥಾನಕ್ಕೆ ಮರಳಬಹುದು ಅಥವಾ ಧರ್ಮೇಂದ್ರ ಪ್ರಧಾನ್ ಅಥವಾ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಜವಾಬ್ದಾರಿಯನ್ನು ವಹಿಸಬಹುದು ಎಂದು ಮೊದಲು ಊಹಿಸಲಾಗಿತ್ತು.ವರದಿಗಳ ಪ್ರಕಾರ, ಬಿಜೆಪಿ ಅಧ್ಯಕ್ಷರಾಗಿ ನಡ್ಡಾ ಅವರು ನಿರೀಕ್ಷೆಯ ಮಟ್ಟದಲ್ಲಿ ಕಾರ್ಯನಿರ್ವಹಿಸಲಿಲ್ಲ ಎನ್ನಲಾಗಿದೆ ಇದರಿಂದಾಗಿ ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಹರಿಯಾಣದಂತಹ ರಾಜ್ಯಗಳಲ್ಲಿ ಬಿಜೆಪಿ ಪಕ್ಷದ ವೈಫಲ್ಯವು ತಳಮಟ್ಟದ ಭಾವನೆಗಳನ್ನು ಗ್ರಹಿಸುವಲ್ಲಿ ಮತ್ತು ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸುವಲ್ಲಿ ಅವರು ವಿಫಲವಾಗಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಹಾಗಾಗಿ ಈಗ ನೂತನ ಅಧ್ಯಕ್ಷರ ಹುಡುಕಾಟದಲ್ಲಿ ತೊಡಗಿರುವ ಬಿಜೆಪಿ ಸಂಭಾವ್ಯ ವ್ಯಕ್ತಿಗಳ ಪಟ್ಟಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಸೇರಿದ್ದಾರೆ. ಅವರು ಮಹಾರಾಷ್ಟ್ರ ಸರ್ಕಾರದಲ್ಲಿ ಮಾಜಿ ಸಚಿವರಾಗಿದ್ದಾರೆ ಮತ್ತು ಬಿಎಲ್ ಸಂತೋಷ್ ನಂತರ ತಮ್ಮ ಕೌಶಲ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಮಹಾರಾಷ್ಟ್ರವು ನಿರ್ಣಾಯಕ ರಾಜ್ಯವಾಗಿದೆ ಮತ್ತು ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿದೆ.ಹೀಗಾಗಿ ಅವರಿಗೆ ಮಣೆಹಾಕಲು ಬಿಜೆಪಿ ಹೈಕಮಾಂಡ್ ಯೋಚಿಸುತ್ತಿದೆ. ಇನ್ನೊಂದೆಡೆಗೆ ತೆಲಂಗಾಣದ ಬಿಜೆಪಿಯ ಒಬಿಸಿ ಮೋರ್ಚಾ ಮುಖ್ಯಸ್ಥ ಕೆ ಲಕ್ಷ್ಮಣ್ ಅವರನ್ನು ಪ್ರಮುಖ ಪಾತ್ರಕ್ಕೆ ಪರಿಗಣಿಸಲಾಗುತ್ತಿದೆ.ಆಂಧ್ರಪ್ರದೇಶದ ನಂತರ ತೆಲಂಗಾಣ ಬಿಜೆಪಿಯ ಮುಂದಿನ ಕೇಂದ್ರಬಿಂದುವಾಗಿದೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಲಕ್ಷ್ಮಣ್ ಸಮತೋಲಿತ ವಿಧಾನಕ್ಕೆ ಹೆಸರುವಾಸಿಯಾಗಿದ್ದಾರೆ.ಇನ್ನೊಬ್ಬ ಸ್ಪರ್ಧಿ ಸುನಿಲ್ ಬನ್ಸಾಲ್, ಪ್ರಸ್ತುತ ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಒಡಿಶಾದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ರಾಜಸ್ತಾನದ ರಾಜ್ಯಸಭಾ ಸದಸ್ಯ ಹಾಗೂ ಭೈರೋನ್ ಸಿಂಗ್ ಶೇಖಾವತ್ ಅವರ ಆಪ್ತರಾಗಿರುವ ಓಂ ಮಾಥುರ್ ಕೂಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ. ಅವರ ನೇರತೆ ಮತ್ತು ಸೌಹಾರ್ದಯುತ ವರ್ತನೆಗೆ ಹೆಸರುವಾಸಿಯಾದ ಮಾಥೂರ್ ಅವರು ಆರ್‌ಎಸ್‌ಎಸ್ ಪ್ರಚಾರಕರಾಗಿದ್ದರು ಮತ್ತು ಈ ಹಿಂದೆ ಗುಜರಾತ್‌ನ ಉಸ್ತುವಾರಿ ವಹಿಸಿದ್ದರು.ಅಮೇಠಿಯಲ್ಲಿ ಸೋಲನುಭವಿಸಿ ಮೋದಿ ಸಂಪುಟದಿಂದ ಕೈಬಿಟ್ಟಿರುವ ಸ್ಮೃತಿ ಇರಾನಿ ಕೂಡ ಬಿಜೆಪಿಯ ಮೊದಲ ಮಹಿಳಾ ಅಧ್ಯಕ್ಷೆ ರೇಸ್‌ನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಕೇಂದ್ರದ ಮಾಜಿ ಸಚಿವ ಅನುರಾಗ್ ಠಾಕೂರ್ ಅವರ ಹೆಸರು ಕೂಡ ಈ ಹುದ್ದೆಗೆ ಸದ್ದು ಮಾಡುತ್ತಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...