ಜೂನ್ 9 ಕ್ಕೆ ನರೇಂದ್ರ ಮೋದಿ ಪ್ರಮಾಣ ವಚನ, 6 ಜಾಗತಿಕ ನಾಯಕರಿಗೆ ಆಹ್ವಾನ ಜೂನ್ 9 ರಂದು ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಸಂಸದೀಯ ಪಕ್ಷದ ಸಭೆಗೆ ಮುನ್ನ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಪ್ರಲ್ಹಾದ್ ಜೋಶಿ ಈ ಘೋಷಣೆ ಮಾಡಿದ್ದಾರೆ. ನವದೆಹಲಿ:ಜೂನ್ 9 ರಂದು ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಸಂಸದೀಯ ಪಕ್ಷದ ಸಭೆಗೆ ಮುನ್ನ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಪ್ರಲ್ಹಾದ್ ಜೋಶಿ ಈ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಆರಂಭದಲ್ಲಿ ಜೂನ್ 8ರ ಶನಿವಾರದಂದು ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಗಳು ತಿಳಿಸಿದ್ದವು.ಆದರೆ, ಶುಕ್ರವಾರ ಮಧ್ಯಾಹ್ನ ಹಳೆ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಎನ್ ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಯಿತು. ಸಭೆಯಲ್ಲಿ ಮೈತ್ರಿ ನಾಯಕರು ಪ್ರಧಾನಿ ಹುದ್ದೆಗೆ ಮೋದಿ ಹೆಸರನ್ನು ಔಪಚಾರಿಕವಾಗಿ ಪ್ರಸ್ತಾಪಿಸಿದರು.ಸಭೆಯ ನಂತರ ಎನ್‌ಡಿಎ ನಾಯಕರು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಜಾಗತಿಕ ನಾಯಕರಿಗೆ ಆಹ್ವಾನ: ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಮತ್ತು ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ ಸೇರಿದಂತೆ ಹಲವಾರು ವಿಶ್ವ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಜೂನ್ 9 ರಂದು ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸರ್ಕಾರ 7,000-8,000 ಅತಿಥಿಗಳಿಗೆ ವಸತಿ ವ್ಯವಸ್ಥೆ ಮಾಡಿದೆ ಎಂದು ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ. , - . . — (@) ಇದನ್ನೂ ಓದಿ: ಸುದ್ದಿ ಮೂಲಗಳ ಪ್ರಕಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ () ಅಧಿಕಾರಿಗಳು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್, ಭೂತಾನ್ ರಾಜ ಜಿಗ್ಮೆ ಖೇಸರ್ ನಾಮ್ಗೈಲ್ ವಾಂಗ್‌ಚುಕ್ ಮತ್ತು ಮಾರಿಷಸ್ ರಾಷ್ಟ್ರದ ಮುಖ್ಯಸ್ಥರ ಹಾಜರಾತಿಯನ್ನು ದೃಢಪಡಿಸಿದ್ದಾರೆ. ಈ ಗಣ್ಯರಿಗೆ ರಾಷ್ಟ್ರ ರಾಜಧಾನಿಯ ನಾಲ್ಕು ಪ್ರಮುಖ ಹೋಟೆಲ್‌ ಗಳಾದ ತಾಜ್ ಪ್ಯಾಲೇಸ್, ದಿ ಒಬೆರಾಯ್, ದಿ ಲೀಲಾ ಪ್ಯಾಲೇಸ್ ಮತ್ತು ಐಟಿಸಿ ಮೌರ್ಯ ದಲ್ಲಿ ವಸತಿ ಕಲ್ಪಿಸಲಾಗುವುದು. ಸಮಾರಂಭದಲ್ಲಿ ಜಾಗತಿಕ ನಾಯಕರಲ್ಲದೆ, ವಕೀಲರು, ವೈದ್ಯರು, ಕಲಾವಿದರು, ಸಾಂಸ್ಕೃತಿಕ ಪ್ರದರ್ಶಕರು ಮತ್ತು ಪ್ರಭಾವಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ವಿವಿಧ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ವಿವಿಧ ಧರ್ಮಗಳ ಸುಮಾರು 50 ಪ್ರಮುಖ ಧಾರ್ಮಿಕ ಮುಖಂಡರನ್ನು ಸಹ ಆಹ್ವಾನಿಸಲಾಗಿದೆ.ಇದಲ್ಲದೆ, ಸಮಾರಂಭದಲ್ಲಿ ಸೆಂಟ್ರಲ್ ವಿಸ್ಟಾ ಯೋಜನೆಯಲ್ಲಿ ಕೆಲಸ ಮಾಡುವ ಕಾರ್ಮಿಕರು, ವಂದೇ ಭಾರತ್ ಮತ್ತು ಮೆಟ್ರೋ ರೈಲುಗಳಲ್ಲಿ ಕೆಲಸ ಮಾಡುವ ರೈಲ್ವೆಯ ಸಿಬ್ಬಂದಿ, ನೈರ್ಮಲ್ಯ ಕಾರ್ಯಕರ್ತರು, ಟ್ರಾನ್ಸ್‌ಜೆಂಡರ್‌ಗಳು, ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳು ಮತ್ತು ವಿಕ್ಷಿತ್ ಭಾರತ್ ರಾಯಭಾರಿಗಳನ್ನು ಒಳಗೊಂಡಿರುತ್ತದೆ. ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದವರು, ಪ್ರಧಾನ ಮಂತ್ರಿಗಳು,ಬುಡಕಟ್ಟು ಮಹಿಳೆಯರು ಮತ್ತು ಪದ್ಮಭೂಷಣ, ಪದ್ಮವಿಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರನ್ನು ಮೋದಿಯವರ ಪ್ರಮಾಣ ವಚನ ಸಮಾರಂಭವನ್ನು ವೀಕ್ಷಿಸಲು ಆಹ್ವಾನಿಸಲಾಗಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...