ಕ್ರಿಕೆಟ್‌ ನಿವೃತ್ತಿಯ ನಂತರ ಬೀದಿಗೆ ಬಿದ್ದ ಕ್ರಿಕೆಟಿಗರು! ಲಾರಿ ಡ್ರೈವರ್‌, ಸೇಲ್ಸ್‌ಮೆನ್‌ಗಳಾಗಿ ಜೀವನ ಸಾಗಿಸುತ್ತಿರುವ ಆಟಗಾರರಿವರು : ಕ್ರಿಕೆಟಿಗರು ತಮ್ಮ ಆಟದ ಆಧಾರದ ಮೇಲೆ ಸಂಪತ್ತು, ಹೆಸರು, ಸ್ಥಾನಮಾನ ಮತ್ತು ಮನ್ನಣೆಯನ್ನು ಗಳಿಸುತ್ತಾರೆ. ಇಂದಿನ ಕಾಲದಲ್ಲಿ ಎಲ್ಲರೂ ಕ್ರಿಕೆಟ್ ಅನ್ನು ಇಷ್ಟಪಡುತ್ತಾರೆ. ಪ್ರತಿಯೊಬ್ಬರೂ ಕ್ರಿಕೆಟ್‌ನಲ್ಲಿ ಆಸಕ್ತಿ ಹೊಂದಿದ್ದು, ಇಂದು ಕ್ರಿಕೆಟ್ ಪ್ರತಿಯೊಬ್ಬರ ನೆಚ್ಚಿನ ಕ್ರೀಡೆಯಾಗಿದೆ ಅಂತಲೇ ಹೇಳಬಹುದು. :ಕ್ರಿಕೆಟಿಗರು ತಮ್ಮ ಆಟದ ಆಧಾರದ ಮೇಲೆ ಸಂಪತ್ತು, ಹೆಸರು, ಸ್ಥಾನಮಾನ ಮತ್ತು ಮನ್ನಣೆಯನ್ನು ಗಳಿಸುತ್ತಾರೆ. ಇಂದಿನ ಕಾಲದಲ್ಲಿ ಎಲ್ಲರೂ ಕ್ರಿಕೆಟ್ ಅನ್ನು ಇಷ್ಟಪಡುತ್ತಾರೆ. ಪ್ರತಿಯೊಬ್ಬರೂ ಕ್ರಿಕೆಟ್‌ನಲ್ಲಿ ಆಸಕ್ತಿ ಹೊಂದಿದ್ದು, ಇಂದು ಕ್ರಿಕೆಟ್ ಪ್ರತಿಯೊಬ್ಬರ ನೆಚ್ಚಿನ ಕ್ರೀಡೆಯಾಗಿದೆ ಅಂತಲೇ ಹೇಳಬಹುದು. ಕ್ರಿಕೆಟಿಗರು ತಮ್ಮ ಆಟದ ಆಧಾರದ ಮೇಲೆ ಸಂಪತ್ತು, ಹೆಸರು, ಸ್ಥಾನಮಾನ ಮತ್ತು ಮನ್ನಣೆಯನ್ನು ಗಳಿಸಿದ್ದಾರೆ. ಇಂದಿನ ಕಾಲದಲ್ಲಿ ಎಲ್ಲರೂ ಕ್ರಿಕೆಟ್ ಅನ್ನು ಇಷ್ಟಪಡುತ್ತಾರೆ. ಪ್ರತಿಯೊಬ್ಬರೂ ಈ ಆಟದಲ್ಲಿ ಆಸಕ್ತಿ ಹೊಂದಿದ್ದಾರೆ. ಇಂದು ಕ್ರಿಕೆಟ್ ಪ್ರತಿಯೊಬ್ಬರ ನೆಚ್ಚಿನ ಕ್ರೀಡೆಯಾಗಿದೆ. ಅದೇ ಸಮಯದಲ್ಲಿ, ಸಣ್ಣ ಹಳ್ಳಿಗಳು ಮತ್ತು ನಗರಗಳ ಕ್ರಿಕೆಟಿಗರು ಇಂದು ತಮ್ಮದೇ ಆದ ವಿಶಿಷ್ಟ ಗುರುತನ್ನು ಸೃಷ್ಟಿಸಿಕೊಂಡಿದ್ದಾರೆ. ಬಾಲ್ಯದಲ್ಲಿ ಬಡತನ ಎದುರಿಸಿದರೂ ಇಂದು ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಮ್ಯಾಥ್ಯೂ ಸಿಂಕ್ಲೇರ್ಮ್ಯಾಥ್ಯೂ ಸಿಂಕ್ಲೇರ್ ಆಸ್ಟ್ರೇಲಿಯಾದಲ್ಲಿ ಜನಿಸಿದರು, ನ್ಯೂಜಿಲೆಂಡ್‌ನ ಆರಂಭಿಕ ಬ್ಯಾಟ್ಸ್‌ಮನ್ ಆಗಿದ್ದ ಇವರು ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ್ದರು. ತಮ್ಮ ಕ್ರಿಕೆಟ್ ವೃತ್ತಿಜೀವನದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರೂ ಸಹ 2013 ರಲ್ಲಿ ಅವರು ಕ್ರಿಕೆಟ್‌ನಿಂದ ನಿವೃತ್ತರಾದ ನಂತರ, ಅವರ ಆರ್ಥಿಕ ಪರಿಸ್ಥಿತಿಯು ಹದಗೆಟ್ಟಿತು. ತನ್ನ ಮನೆಯ ಖರ್ಚನ್ನು ನಿಭಾಯಿಸಲು ನೇಪಿಯರ್‌ನಲ್ಲಿ ಈತ ಇದೀಗ ಸೇಲ್ಸ್‌ಮೆನ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಅರ್ಷದ್ ಖಾನ್ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅರ್ಷದ್ ಖಾನ್ ವಿಶ್ವದ ಅತಿ ಎತ್ತರದ ಸ್ಪಿನ್ನರ್‌ಗಳಲ್ಲಿ ಒಬ್ಬರು. ಹಲವು ವರ್ಷಗಳ ಕಾಲ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದ ಅವರು, 1993 ರಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಆಡಿದ್ದರು.2006 ರಲ್ಲಿ ಕ್ರಿಕೆಟ್‌ನಿಂದ ನಿವೃತ್ತರಾದ ಇವರು ನಂತರ ಆರ್ಥಿಕ ಪರಿಸ್ಥಿತಿ ಗಮನಾರ್ಹವಾಗಿ ಹದಗೆಟ್ಟಿತು. ಅದರ ನಂತರ ಅವರು ಆಸ್ಟ್ರೇಲಿಯಾಕ್ಕೆ ಹೋಗಿ ಟ್ಯಾಕ್ಸಿ ಓಡಿಸಲು ಪ್ರಾರಂಭಿಸಿದರು. ಕ್ರಿಸ್ ಕ್ರೇನ್ಸ್ಕ್ರಿಸ್ ಕ್ರೇನ್ ಅವರ ಸಮಯದಲ್ಲಿ ವಿಶ್ವದ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿದ್ದರು. ಹಲವು ಪಂದ್ಯಗಳಲ್ಲಿ ನ್ಯೂಜಿಲೆಂಡ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದ ಇವರು ನಿವೃತ್ತರಾದ ನಂತರ, ಅವರು ವಜ್ರದ ವ್ಯಾಪಾರವನ್ನು ಪ್ರಾರಂಭಿಸಿದರು. ಇದರಲ್ಲಿ ಅವರು ಸಾಕಷ್ಟು ಲಾಭ ಅನುಭವಿಸಿದ ನಂತರ ಅವರ ಆರೋಗ್ಯ ಅದಗೆಟ್ಟಿತು, ಅನಾರೋಗ್ಯದಿಂದ ಚೇತರಿಸಿಕೊಂಡ ನಂತರ ವಜ್ರದ ವ್ಯಾಪಾರವನ್ನು ಬಿಟ್ಟು ಕುಟುಂಬವನ್ನು ಪೋಷಿಸಲು ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...