6,6,6,6,6,6,6,6... 10 ಎಸೆತಕ್ಕೆ 60 ರನ್ ಚಚ್ಚಿದ ಇಶಾನ್‌ ಕಿಶನ್!‌ ಟೀಂ ಇಂಡಿಯಾಗೆ ಆಯ್ಕೆಯಾಗದಿದ್ದಕ್ಕೆ 'ಸೇಡು' ತೀರಿಸಿಕೊಂಡರೇ ಸ್ಟಾರ್‌ ʼದಾಂಡಿಗʼ : ಈ ಟೂರ್ನಿಯಲ್ಲಿ ಜಾರ್ಖಂಡ್ ತಂಡದ ನಾಯಕ ಇಶಾನ್ ಕಿಶನ್ ಬುಚ್ಚಿ ಬಾಬು. ಇಶಾನ್ ಆರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಂದರು. ರಾಮ್‌ವೀರ್ ಗುರ್ಜರ್, ಅಧೀರ್ ಪ್ರತಾಪ್ ಸಿಂಗ್ ಮತ್ತು ಆಕಾಶ್ ರಾಜಾವತ್ ವಿರುದ್ಧ ಹೆಚ್ಚು ರನ್ ಗಳಿಸಿದ ಇಶಾನ್‌, ಈ ಮೂವರು ಬೌಲರ್‌ʼಗಳ ವಿರುದ್ಧ 8 ಸಿಕ್ಸರ್‌ ಬಾರಿಸಿದ್ದಾರೆ. :ಟೀಂ ಇಂಡಿಯಾದಿಂದ ಹೊರಬಿದ್ದ ಇಶಾನ್ ಕಿಶನ್ ಇದೀಗ ಟೀಕಾಕಾರರಿಗೆ ತಮ್ಮ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ. ತಮಿಳುನಾಡಿನಲ್ಲಿ ನಡೆಯುತ್ತಿರುವ ಬುಚ್ಚಿ ಬಾಬು ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಈ ಎಡಗೈ ಬ್ಯಾಟ್ಸ್‌ಮನ್ ಸ್ಫೋಟಕ ಶತಕ ಸಿಡಿಸಿದ್ದಾರೆ. ಇನ್ನು ಈ ಸುದ್ದಿ ಬರೆಯುವ ತನಕ, ಇಶಾನ್ 88 ಎಸೆತಗಳಲ್ಲಿ 105 ರನ್ ಗಳಿಸಿದ್ದರು ಅಷ್ಟೇ ಅಲ್ಲದೆ, 10 ಸಿಕ್ಸರ್‌ಗಳನ್ನು ಸಿಡಿಸಿದ್ದರು. ಇದನ್ನೂ ಓದಿ: ಈ ಟೂರ್ನಿಯಲ್ಲಿ ಜಾರ್ಖಂಡ್ ತಂಡದ ನಾಯಕ ಇಶಾನ್ ಕಿಶನ್ ಬುಚ್ಚಿ ಬಾಬು. ಇಶಾನ್ ಆರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಂದರು. ರಾಮ್‌ವೀರ್ ಗುರ್ಜರ್, ಅಧೀರ್ ಪ್ರತಾಪ್ ಸಿಂಗ್ ಮತ್ತು ಆಕಾಶ್ ರಾಜಾವತ್ ವಿರುದ್ಧ ಹೆಚ್ಚು ರನ್ ಗಳಿಸಿದ ಇಶಾನ್‌, ಈ ಮೂವರು ಬೌಲರ್‌ʼಗಳ ವಿರುದ್ಧ 8 ಸಿಕ್ಸರ್‌ ಬಾರಿಸಿದ್ದಾರೆ. ಇದನ್ನೂ ಓದಿ: ಇಶಾನ್ ಕಿಶನ್ ಕಳೆದ ವರ್ಷ ಡಿಸೆಂಬರ್ʼನಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದರು. ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮಧ್ಯದಲ್ಲಿ ಬಿಟ್ಟು ಮರಳಿದ್ದರು. ಇದಾದ ನಂತರ, ಐಪಿಎಲ್‌ಗೂ ಮುನ್ನ ಅವರು ಎನ್‌ʼಸಿಎ ಬದಲಿಗೆ ಹಾರ್ದಿಕ್ ಪಾಂಡ್ಯ ಅವರೊಂದಿಗೆ ವಡೋದರಾದಲ್ಲಿ ತರಬೇತಿ ಪಡೆದ ಕಾರಣ ವಿವಾದಕ್ಕೆ ಒಳಗಾಗಿದ್ದರು. ಇದಾದ ಬಳಿಕ ಇಶಾನ್ ಐಪಿಎಲ್‌ʼನಲ್ಲಿ ಮಿಶ್ರ ಪ್ರದರ್ಶನ ನೀಡಿದ್ದರು. ಟಿ20 ವಿಶ್ವಕಪ್ ತಂಡದಲ್ಲಿ ಇಶಾನ್ ಆಯ್ಕೆಯಾಗಿರಲಿಲ್ಲ. ಇಶಾನ್ ದೇಶೀಯ ಕ್ರಿಕೆಟ್ ಆಡಿದಾಗ ಮಾತ್ರ ಟೀಂ ಇಂಡಿಯಾಗೆ ಮರಳಲು ಸಾಧ್ಯವಾಗುತ್ತದೆ ಎಂದು ಹೇಳಲಾಗಿತ್ತು. ಇದೀಗ ಇಶಾನ್ ಬುಚ್ಚಿ ಬಾಬು ಟೂರ್ನಿಯಲ್ಲಿ ಆಡಲು ನಿರ್ಧರಿಸಿದ್ದಾರೆ. ಜಾರ್ಖಂಡ್ ಅವರನ್ನು ತಂಡದ ನಾಯಕನನ್ನಾಗಿ ಮಾಡಿದೆ. ಇದೀಗ ಈ ಆಟಗಾರ ಮೊದಲ ಪಂದ್ಯದಲ್ಲೇ ಅದ್ಭುತ ಶತಕ ಬಾರಿಸುವ ಮೂಲಕ ಪುನರಾಗಮನದ ಹಾದಿಯಲ್ಲಿ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...