2025: ಅಭಿಮಾನಿಗಳಿಗೆ ಗುಡ್‌ ನ್ಯೂಸ್‌.. ತಂಡಕ್ಕೆ ಎಂಟ್ರಿ ಕೊಟ್ಟ ಹಿಟ್‌ಮ್ಯಾನ್‌..! : ಐಪಿಎಲ್ 2025ರ ಮೆಗಾ ಹರಾಜಿನ ಸಂದರ್ಭದಲ್ಲಿ ಫ್ರಾಂಚೈಸಿಗಳು ಸಂವೇದನಾಶೀಲ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ತಂಡದಲ್ಲಿ ಕೇವಲ ನಾಲ್ಕು ಹಳೆಯ ಆಟಗಾರರನ್ನು ಉಳಿಸಿಕೊಳ್ಳುವ ಅವಕಾಶ ತಂಡಗಳಿಗೆ ನೀಡಿದ್ದು, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್‌ ತಂಡ ತೊರೆಯಲಿದ್ದಾರೆ ಎಂದು ವರದಿಯಾಗಿದೆ. :ಐಪಿಎಲ್ 2025ರ ಮೆಗಾ ಹರಾಜಿನ ಸಂದರ್ಭದಲ್ಲಿ ಫ್ರಾಂಚೈಸಿಗಳು ಸಂವೇದನಾಶೀಲ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ತಂಡದಲ್ಲಿ ಕೇವಲ ನಾಲ್ಕು ಹಳೆಯ ಆಟಗಾರರನ್ನು ಉಳಿಸಿಕೊಳ್ಳುವ ಅವಕಾಶ ತಂಡಗಳಿಗೆ ನೀಡಿದ್ದು, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್‌ ತಂಡ ತೊರೆಯಲಿದ್ದಾರೆ ಎಂದು ವರದಿಯಾಗಿದೆ. ಮುಂಬೈ ತಂಡಕ್ಕೆ ಐದು ಬಾರಿ ಚಾಂಪಿಯನ್‌ಶಿಪ್‌ ಗೆದ್ದುಕೊಟ್ಟಿದ್ದ ರೋಹಿತ್‌ ಕಳಗಿಳಿಸಿ, ಗುಜರಾತ್‌ ಟೈಟನ್ಸ್‌ನ ನಾಯಕರಾಗಿದ್ದ ತಂಡಕ್ಕೆ ಕರೆತಂದು, ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನಾಗಿ ನೇಮಿಸಿದ್ದಕ್ಕೆ ರೋಹಿತ್ ಅಸಮಾಧಾನ ವ್ಯಕ್ತಪಡಿಸಿದ್ದರು. ಸಹಾಯಕ ಕೋಚ್ ಅಭಿಷೇಕ್ ನಾಯರ್ ಅವರೊಂದಿಗೆ ಮುಂಬೈ ಇಂಡಿಯನ್ಸ್ ಬಗ್ಗೆ ರೋಹಿತ್ ಶರ್ಮಾ ಮಾಡಿದ ಕಾಮೆಂಟ್ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಮುಂಬೈ ಇಂಡಿಯನ್ಸ್ ತಂಡದ ಜೊತೆಗಿನ ಪಯಣ ಮುಗಿದಿದೆ ಎಂದು ಅಭಿಷೇಕ್‌ಗೆ ರೋಹಿತ್ ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿತ್ತು. ರೋಹಿತ್ ಶರ್ಮಾ ಜೊತೆಗೆ ಸೂರ್ಯಕುಮಾರ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ಮುಂಬೈ ತೊರೆಯಲಿದ್ದಾರೆ ಎನ್ನುವ ಸುದ್ದಿ ಭಾರಿ ಚರ್ಚೆಯಲ್ಲಿದೆ. ಇದನ್ನೂ ಓದಿ: ಬೇರೆ ತಂಡಗಳಿಂದ ನಾಯಕತ್ವದ ಆಫರ್ ಬಂದಿರುವ ಹಿನ್ನೆಲೆಯಲ್ಲಿ ಈ ಮೂವರು ಸ್ಟಾರ್ ಆಟಗಾರರು ಮುಂಬೈ ಇಂಡಿಯನ್ಸ್ ತೊರೆಯುತ್ತಾರೆ ಎಂಬ ಪ್ರಚಾರ ನಡೆಯುತ್ತಿದೆ. ರೋಹಿತ್ ಶರ್ಮಾಗೆ ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್‌ನಿಂದ ನಾಯಕತ್ವದ ಆಫರ್‌ಗಳು ಬಂದಿವೆಯಂತೆ. ಆದರೆ ರೋಹಿತ್ ಶರ್ಮಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೋಗುವ ಆಸೆಯನ್ನಿಟ್ಟಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ವಿದಾಯ ಹೇಳಿದ ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಂಡದ ಮೂಲಗಳು ತಿಳಿಸಿವೆ. ಆರ್‌ಸಿಬಿ ಮ್ಯಾನೇಜ್‌ಮೆಂಟ್ ಈಗಾಗಲೇ ರಾಹುಲ್ ದ್ರಾವಿಡ್ ಜೊತೆ ಸಮಾಲೋಚನೆ ನಡೆಸಿದೆಯಂತೆ. ದ್ರಾವಿಡ್ ತನ್ನ ತವರು ರಾಜ್ಯದಿಂದ ಆರ್‌ಸಿಬಿಗೆ ಕೋಚ್ ಅಥವಾ ಮೆಂಟರ್ ಆಗಿ ಕೆಲಸ ಮಾಡಲು ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಆಯ್ಕೆಯಾದರೆ, ರೋಹಿತ್ ಶರ್ಮಾ ಅವರನ್ನು ಆರ್‌ಸಿಬಿಗೆ ಕರೆತರುತ್ತಾರೆ ಎಂದು ತಂಡದ ಅಭಿಮಾನಿಗಳು ನಂಬಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಆರ್‌ಸಿಬಿ ಐಪಿಎಲ್ ಪ್ರಶಸ್ತಿಯ ಕನಸನ್ನು ನನಸಾಗಿಸುತ್ತದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...