ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ ಆಕಾಶ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಪ್ರಕಾಶ್ ಸಿದ್ದಪ್ಪ ನಿರ್ಮಿಸುತ್ತಿರುವ ಹೊಸ ಚಿತ್ರವನ್ನು ರೋಮಿಯೋ, ರಾಗ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದಾರೆ. ಆಕಾಶ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಪ್ರಕಾಶ್ ಸಿದ್ದಪ್ಪ ನಿರ್ಮಿಸುತ್ತಿರುವ ಹೊಸ ಚಿತ್ರವನ್ನು ರೋಮಿಯೋ, ರಾಗ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದಾರೆ. ತಮ್ಮ ನಟನೆಯಿಂದಲೇ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕ ಪ್ರಕಾಶ್, "ರೈತರ ಕುರಿತ ವಿಷಯ ನನ್ನ ಹೃದಯಕ್ಕೆ ತುಂಬಾ ಹತ್ತಿರವಾಗಿದೆ" ಮತ್ತು ಪಿ.ಸಿ. ಶೇಖರ್ ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯಾಗಿದ್ದರು. ಈಗ ಅವರು ಅಲಯನ್ಸ್ ಯೂನಿವರ್ಸಿಟಿಯ ಫಿಲ್ಮ್ ಮೇಕಿಂಗ್ ಕೋರ್ಸ್‌ನ ಸಹಯೋಗದಲ್ಲಿ ಆಕಾಶ ಪಿಕ್ಚರ್ಸ್ ಬ್ಯಾನರ್‌ನಡಿಯಲ್ಲಿ ಮೊದಲ ಚಿತ್ರವನ್ನು ನಿರ್ದೇಶಿಸುತ್ತಿರುವುದು ಸಂತೋಷದ ಸಂಗತಿ. ಇದನ್ನೂ ಓದಿ: ಅಲಯನ್ಸ್‌ನಲ್ಲಿ ಕಲಿತು ಈಗ ಬೇರೆ ಬೇರೆ ಉದ್ಯೋಗದಲ್ಲಿರುವ ಹಳೆ ವಿದ್ಯಾರ್ಥಿಗಳು ಚಿತ್ರ ನಿರ್ಮಾಣದಲ್ಲಿ ನಮ್ಮೊಂದಿಗಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಆರಂಭಿಸುವ ಪ್ರಯತ್ನ ನಡೆಯುತ್ತಿದೆ. ಚಿತ್ರದಲ್ಲಿ ವಿಜಯ ರಾಘವೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಉಳಿದ ಕಲಾವಿದರು ಮತ್ತು ತಂತ್ರಜ್ಞರ ಕುರಿತು ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡಲಾಗುವುದು. ಅಲಯನ್ಸ್ ಯೂನಿವರ್ಸಿಟಿಯ ಚಲನಚಿತ್ರ ನಿರ್ಮಾಣ ಮತ್ತು ಮಾಧ್ಯಮ ಅಧ್ಯಯನದ ವಿದ್ಯಾರ್ಥಿಗಳಿಗೆ ಅವಕಾಶವನ್ನು ನೀಡುತ್ತಿರುವ ಆಕಾಶ ಪಿಕ್ಚರ್ಸ್ ಬ್ಯಾನರ್‌ನಡಿಯಲ್ಲಿ ಚಲನಚಿತ್ರವನ್ನು ನಿರ್ದೇಶಿಸುವುದಕ್ಕಿಂತ ಹೆಚ್ಚಿನ ಖುಷಿ ಏನಿದೆ. ಈ ಅವಕಾಶಕ್ಕಾಗಿ ಪ್ರಕಾಶ್ ಅವರಿಗೆ ಧನ್ಯವಾದಗಳು. ಇದನ್ನು ಗುರು-ಶಿಷ್ಯ ಸಂಬಂಧ ಎನ್ನುತ್ತಾರೆ. ಇನ್ನು ಈ ಸಿನಿಮಾದ ಬಗ್ಗೆ ಮಾತನಾಡೋಣ, ಇದು ರೈತನ ಕುರಿತ ಸಿನಿಮಾ. ಬಹುತೇಕ ಚಿತ್ರೀಕರಣ ಹಳ್ಳಿಯಲ್ಲಿಯೇ ನಡೆಯಲಿದೆ. ರೈತ ಮತ್ತು ಸಾರ್ವಜನಿಕರ ನಡುವಿನ ಸಂಬಂಧದ ಜೊತೆಗೆ ದೇಶಕ್ಕೆ ರೈತನ ಮಹತ್ವವನ್ನು ತೋರಿಸುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಲಾಗುವುದು. ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಕಥೆ ಬರೆಯುವಾಗ ವಿಜಯ ರಾಘವೇಂದ್ರರನ್ನು ಗಮನದಲ್ಲಿಟ್ಟುಕೊಂಡು ಕಥೆ ಬರೆದಿದ್ದೆ. ಇದನ್ನೂ ಓದಿ: ಅವರಿಗೆ ಕಥೆ ಹೇಳಿದಾಗ ಅವರು ಇಷ್ಟಪಟ್ಟು ನಟಿಸಲು ಒಪ್ಪಿದ್ದು ತುಂಬಾ ಖುಷಿ ತಂದಿದೆ. ಚಿತ್ರವು ಅದ್ದೂರಿ ತಾರಾಗಣ ಮತ್ತು ತಾಂತ್ರಿಕ ಸಿಬ್ಬಂದಿಯನ್ನು ಹೊಂದಿದೆ. ಇಷ್ಟು ವರ್ಷಗಳ ನನ್ನ ಸಿನಿ ಪಯಣದಲ್ಲಿ ಇದೊಂದು ವಿಭಿನ್ನ ಶೈಲಿಯ ಸಿನಿಮಾ. ಇದು ನನ್ನ ಹೃದಯಕ್ಕೆ ಹತ್ತಿರವಾದ ಚಿತ್ರವಾಗಿದ್ದು, ತುಂಬಾ ಪ್ರೀತಿಯಿಂದ ಮಾಡಲಾಗುತ್ತಿದೆ ಎನ್ನುತ್ತಾರೆ ನಿರ್ದೇಶಕ ಪಿ.ಸಿ.ಶೇಖರ್. ನಿರ್ದೇಶಕ ಪಿ.ಸಿ.ಶೇಖರ್ ಬಂದು ಈ ಚಿತ್ರದ ಕಥೆ ಹೇಳಿದಾಗ ಕಥೆ ಕೇಳಿ ತುಂಬಾ ಖುಷಿಯಾಯಿತು. ಅನ್ನದಾತ ರೈತನ ಕುರಿತಾದ ಈ ಚಿತ್ರದ ನಾಯಕನನ್ನಾಗಿ ಆಯ್ಕೆ ಮಾಡಿದ ನಿರ್ದೇಶಕ ಪಿ.ಸಿ.ಶೇಖರ್ ಹಾಗೂ ನಿರ್ಮಾಪಕ ಪ್ರಕಾಶ್ ಸಿದ್ದಪ್ಪ ಅವರಿಗೆ ಧನ್ಯವಾದಗಳು. ಪಿ.ಸಿ.ಶೇಖರ್ ನಿರ್ದೇಶನದ ನನ್ನ ಮೊದಲ ಸಿನಿಮಾ ಇದು ಎನ್ನುತ್ತಾರೆ ನಟ ವಿಜಯ ರಾಘವೇಂದ್ರ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...