ನೇಪಾಳದಲ್ಲಿ ವಿನಾಶ ಸೃಷ್ಟಿಸಿದ ಪ್ರಬಲ ಭೂಕಂಪ: 129 ಮಂದಿ ಸಾವು-ಸೇನೆಯಿಂದ ಕಾರ್ಯಾಚರಣೆ : ಭೂಕಂಪದ ಕೇಂದ್ರ ಬಿಂದು ನೇಪಾಳದ ಜಾಜರ್ಕೋಟ್ ಜಿಲ್ಲೆಯ ಲಾಮಿಡಾನಾದಲ್ಲಿ ಗೋಚರಿಸಿದೆ. ಅದೇ ಪ್ರದೇಶದಲ್ಲಿ ಗರಿಷ್ಠ ಪ್ರಮಾಣದಲ್ಲಿ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ನಷ್ಟವಾಗಿದ್ದು, ಇಲ್ಲಿಯವರೆಗೆ 129 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. :ಕಳೆದ ದಿನ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ನೇಪಾಳ ನಲುಗಿ ಹೋಗಿದೆ. ಇದರ ಪ್ರಭಾವ ಭಾರತದ ರಾಜ್ಯಗಳಾದ ಬಿಹಾರ, ಯುಪಿ ಮತ್ತು ದೆಹಲಿಯಲ್ಲೂ ಗೋಚರಿಸಿತ್ತು. ಭೂಕಂಪನದ ಪ್ರಬಲತೆ ರಿಕ್ಟರ್ ಮಾಪಕದಲ್ಲಿ 6.4 ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಭೂಕಂಪದ ಕೇಂದ್ರ ಬಿಂದುದ ಜಾಜರ್ಕೋಟ್ ಜಿಲ್ಲೆಯ ಲಾಮಿಡಾನಾದಲ್ಲಿ ಗೋಚರಿಸಿದೆ. ಅದೇ ಪ್ರದೇಶದಲ್ಲಿ ಗರಿಷ್ಠ ಪ್ರಮಾಣದಲ್ಲಿ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ನಷ್ಟವಾಗಿದ್ದು, ಇಲ್ಲಿಯವರೆಗೆ 129 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕಳೆದ ರಾತ್ರಿ 11.39 ಕ್ಕೆ ಸಂಭವಿಸಿದ ಭೂಕಂಪದ ಕೇಂದ್ರಬಿಂದುವು ಜಜರ್‌ಕೋಟ್‌’ನ ಬರೆಕೋಟ್‌ನಲ್ಲಿತ್ತು, ನಲ್ಗಢ ಪುರಸಭೆ ಮತ್ತು ರುಕುಂಪಾಶ್ಚಿಮ್‌’ನ ಅಥಾವಿಸ್ಕೋಟ್ ಪುರಸಭೆಯಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ. ಅಷ್ಟೇ ಅಲ್ಲದೆ, ಎರಡು ಜಿಲ್ಲೆಗಳಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಪ್ರಸ್ತುತ ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಅವರು ಪರಿಹಾರ ಕಾರ್ಯಕ್ಕೆ ಸೇನೆಯನ್ನು ನಿಯೋಜಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...