ನಲ್ಲಿ ಭಾರತ-ಅಮೆರಿಕಾದ ಶತ್ರು ಮತ್ತು ಲಷ್ಕರ್ ಉಗ್ರನನ್ನು ರಕ್ಷಿಸಲು ವೀಟೋ ಬಳಸಿದ ಚೀನಾ : 26/11 ದಾಳಿಯ ಮೋಸ್ಟ್ ವಾಂಟೆಡ್ ಲಷ್ಕರ್ ಉಗ್ರ ಸಾಜಿದ್ ಮಿರ್ ನನ್ನು ವಿಶ್ವಸಂಸ್ಥೆಯ ಜಾಗತಿಕ ಭಯೋತ್ಪಾದಕರ ಪಟ್ಟಿಯಲ್ಲಿ ಸೇರಿಸುವ ಪ್ರಸ್ತಾಪವನ್ನು ಚೀನಾ ತಡೆಹಿಡಿದಿದೆ. :ಭಯೋತ್ಪಾದನೆಗೆ ಸಂಬಂಧಿಸಿದಂತೆ ಮತ್ತೊಮ್ಮೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಚೀನಾ ಬಣ್ಣ ಬಯಲಾಗಿದೆ. ವಿಶ್ವಸಂಸ್ಥೆಯಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಾಜಿದ್ ಮಿರ್ ಅನ್ನು ಜಾಗತಿಕ ಭಯೋತ್ಪಾದಕ ಎಂದು ಪಟ್ಟಿ ಮಾಡುವ ಭಾರತ ಮತ್ತು ಅಮೆರಿಕಾದ ಪ್ರಸ್ತಾವನೆಗೆ ಚೀನಾ ಮತ್ತೊಮ್ಮೆ ಅಡ್ಡಗಾಲು ಹಾಕಿದೆ. ಸಾಜಿದ್ ಮಿರ್‌ ಮೇಲೆ ಅಮೆರಿಕ 5 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ವಿಶ್ವಸಂಸ್ಥೆಯಲ್ಲಿ ಮಿರ್‌ನನ್ನು ನಾಮನಿರ್ದೇಶನ ಮಾಡುವ ಪ್ರಸ್ತಾಪವನ್ನು ನಿಲ್ಲಿಸುವ ಉದ್ದೇಶದಿಂದ ಚೀನಾ ಅದನ್ನು ಹೋಲ್ಡ್ ಮಾಡಿತ್ತು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಬಂಧಗಳ ಸಮಿತಿಯ ಅಡಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕರನ್ನು ಕಪ್ಪುಪಟ್ಟಿಗೆ ಸೇರಿಸಲು ತಂದ ಪ್ರಸ್ತಾಪಗಳನ್ನು ಚೀನಾ ಈ ಹಿಂದೆ ಹಲವು ಬಾರಿ ತಡೆಹಿಡಿದಿದೆ ಎಂಬುದು ಇಲ್ಲಿ ಉಲ್ಲೇಖನೀಯ. ಸಾಜಿದ್ ಮಿರ್ ಮುಂಬೈ ದಾಳಿಯ ಆರೋಪಿಯಾಗಿದ್ದಾನೆ26/11 ಮುಂಬೈ ದಾಳಿಯಲ್ಲಿಮೋಸ್ಟ್ ವಾಂಟೆಡ್ ಆಗಿದ್ದಾನೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ) 2008 ರಲ್ಲಿ ಮುಂಬೈಗೆ ಭಯೋತ್ಪಾದಕರನ್ನು ಕಳುಹಿಸುವ ಮೂಲಕ ಈ ದಾಳಿಗಳನ್ನು ನಡೆಸಿತ್ತು. ಆ ಸಂದರ್ಭದಲ್ಲಿ ಭಯೋತ್ಪಾದಕರು ಹೋಟೆಲ್‌ಗಳು, ಆಸ್ಪತ್ರೆಗಳು, ಕೆಫೆಗಳು, ರೈಲು ನಿಲ್ದಾಣಗಳು ಸೇರಿದಂತೆ ಹಲವು ಸ್ಥಳಗಳನ್ನು ಗುರಿಯಾಗಿಸಿದ್ದರು. ಈ ದಾಳಿಯಲ್ಲಿ 170ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಇದನ್ನೂ ಓದಿ- ಈ ದಾಳಿಯಲ್ಲಿ ಆರು ಅಮೆರಿಕನ್ನರು ಸಹ ಸಾವನ್ನಪ್ಪಿದ್ದಾರೆ. ಭಯೋತ್ಪಾದಕ ಮಿರ್ ದಾಳಿಯ ಪ್ರಮುಖ ರುವಾರಿಯಾಗಿದ್ದ ಎನ್ನಲಾಗಿದೆ. ದಾಳಿಯ ವೇಳೆ ಭಯೋತ್ಪಾದಕರಿಗೆ ಸೂಚನೆಗಳನ್ನು ಈತ ನೀಡಿದ್ದನು ಎನ್ನಲಾಗಿದೆ. ಇದಲ್ಲದೆ, 2008 ಮತ್ತು 2009 ರ ನಡುವೆ ಡೆನ್ಮಾರ್ಕ್‌ನಲ್ಲಿ ಸುದ್ದಿ ಪತ್ರಿಕೆಯೊಂದರ ಉದ್ಯೋಗಿಗಳ ವಿರುದ್ಧ ಸಾಜಿದ್ ಮಿರ್ ಭಯೋತ್ಪಾದಕ ದಾಳಿಯ ಸಂಚನ್ನು ರೂಪಿಸಿದ್ದ. ಇದನ್ನೂ ಓದಿ- ಬಂಧನದ ವಾರೆಂಟ್ ಬಿಡುಗಡೆ ಮಾಡಿದ್ದ ಅಮೆರಿಕಾಏಪ್ರಿಲ್ 21, 2011 ರಂದು, ಯುನೈಟೆಡ್ ಸ್ಟೇಟ್ಸ್ ಡಿಸ್ಟ್ರಿಕ್ಟ್ ಕೋರ್ಟ್ ಸೇರಿದಂತೆ ಹಲವಾರು ನ್ಯಾಯಾಲಯಗಳು ಮಿರ್ ವಿರುದ್ಧ ಆರೋಪಗಳನ್ನು ನಿಗದಿಪಡಿಸಿದ್ದವು. ವಿದೇಶಿ ಸರ್ಕಾರಿ ಆಸ್ತಿಯನ್ನು ಹಾನಿ ಮಾಡಲು, ಭಯೋತ್ಪಾದಕರಿಗೆ ಸಹಾಯ ಮಾಡಲು, ಯುನೈಟೆಡ್ ಸ್ಟೇಟ್ಸ್ನ ಹೊರಗೆ ನಾಗರಿಕನನ್ನು ಕೊಂದ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ ಆರೋಪವನ್ನು ಅವರು ಆತನ ಮೇಲೆ ಹೊರಿಸಿದ್ದರು. ಇದಾದ ಬಳಿಕ ಏಪ್ರಿಲ್ 22, 2011 ರಂದು ಅಮೇರಿಕಾ ಮಿರ್ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು. ಇದನ್ನೂ ನೋಡಿ- ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...