ಚರ್ಮದಲ್ಲಿ ಈ ಲಕ್ಷಣಗಳು ಕಂಡು ಬಂದರೆ ಅದು ಹೃದಯಾಘಾತದ ಮುನ್ಸೂಚನೆ :ಹೃದಯದಲ್ಲಿ ಏನೇ ಬದಲಾವಣೆಯಾದರೂ ನಮ್ಮ ದೇಹ ಮೊದಲೇ ನಮಗೆ ಮುನ್ಸೂಚನೆ ನೀಡುತ್ತದೆ. ಹಾಗೆಯೇ ಹೃದಯಾಘಾತಕ್ಕೂ ಮುನ್ನ ನಮ್ಮ ದೇಹದಲ್ಲಿ ಕೆಲವು ಬದಲಾವಣೆಗಳು ಗೋಚರಿಸುತ್ತದೆ. :ಹೃದಯಕ್ಕೆ ಸರಿಯಾಗಿ ರಕ್ತ ಪೂರೈಕೆ ಆಗದೆ ಹೃದಯವು ಕಾರ್ಯನಿರ್ವಹಿಸುವುದನ್ನು ನಿಲ್ಲಿಸುವುದಕ್ಕೆ ಹೃದಯಾಘಾತ ಎನ್ನುತ್ತಾರೆ. ನಮ್ಮ ಹೃದಯದಲ್ಲಿ ಏನೇ ಬದಲಾವಣೆಯಾದರೂ ನಮ್ಮ ದೇಹ ಮೊದಲೇ ನಮಗೆ ಮುನ್ಸೂಚನೆ ನೀಡುತ್ತದೆ. ಹಾಗೆಯೇ ಹೃದಯಾಘಾತಕ್ಕೂ ಮುನ್ನ ನಮ್ಮ ದೇಹದಲ್ಲಿ ಕೆಲವು ಬದಲಾವಣೆಗಳು ಗೋಚರಿಸುತ್ತದೆ. ಹೃದಯಾಘಾತದ ಇತರ ಚಿಹ್ನೆಗಳು :ಎದೆನೋವಿನ ಹೊರತಾಗಿ,ಅನೇಕ ಲಕ್ಷಣಗಳು ಕಾಣಿಸುತ್ತವೆ.ಚರ್ಮವು ತೆಳುವಾಗಿ, ತಿಳಿ ಬೂದು ಬಣ್ಣಕ್ಕೆ ತಿರುಗುತ್ತದೆ. ಪದೇ ಪದೇ ವಿನಾ ಕಾರಣ ಬೆವರೂ ಬರುತ್ತದೆ.ವಾಕರಿಕೆ,ಉಸಿರಾಟದಲ್ಲಿ ತೊಂದರೆ, ಆತಂಕ, ತಲೆಸುತ್ತುವುದು ಮುಂತಾದ ಲಕ್ಷಣಗಳು ಕಾಣಿಸುತ್ತವೆ. ಇದನ್ನೂ ಓದಿ : ಲಿಂಗವನ್ನು ಆಧರಿಸಿ ಗೋಚರಿಸುತ್ತವೆ ಈ ಲಕ್ಷಣಗಳು :ಪುರುಷರಿಗೆ ಹೃದಯಾಘಾತಕ್ಕೂ ಮೊದಲು ಎದೆ ನೋವು ಕಾಣಿಸಿಕೊಂಡರೆ, ಮಹಿಳೆಯರಿಗೆ ಉಸಿರಾಟದ ತೊಂದರೆ, ಕುತ್ತಿಗೆ ಮತ್ತು ದವಡೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಬ್ಲಡ್ ಶುಗರ್ :ಹೃದಯಾಘಾತದ ಅಪಾಯವನ್ನು ಹೆಚ್ಚಿಸುವ ಇನ್ನೊಂದು ಕಾರಣವೆಂದರೆ ಮಧುಮೇಹ.ಮಧುಮೇಹವು ಹೃದಯಾಘಾತದ ಅತ್ಯಂತ ಸಂದಿಗ್ದ ಲಕ್ಷಣಗಳಲ್ಲಿ ಒಂದಾಗಿದೆ.ಈ ಕಾರಣದಿಂದಾಗಿ ರೋಗಿಗೆ ಸೌಮ್ಯವಾದ ಎದೆಯುರಿ ಅಥವಾ ಎದೆ ನೋವೂ ಕಾಣಿಸುತ್ತದೆ. ಬಹುತೇಕ ಮಂದಿ ಈ ಹಂತವನ್ನು ನಿರ್ಲಕ್ಷಿಸಿ ಬಿಡುತ್ತಾರೆ. ಅಪಾಯವನ್ನು ಕಡಿಮೆ ಮಾಡುವುದು ಹೇಗೆ ?:ಆರೋಗ್ಯಕರ ಆಹಾರ ಮತ್ತುಸಹಾಯದಿಂದ ಮಾತ್ರ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಬಹುದು.ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು, ಎಲ್ಲಾ ಪೋಷಕಾಂಶಗಳನ್ನು ಒಳಗೊಂಡಿರುವ ಆರೋಗ್ಯಕರ ಆಹಾರವನ್ನು ತೆಗೆದುಕೊಳ್ಳಿ. ಇದನ್ನೂ ಓದಿ : ತರಕಾರಿಗಳ ಸೇವನೆ :ಆಹಾರದಲ್ಲಿ ತರಕಾರಿಗಳನ್ನು ಸೇರಿಸಿಕೊಳ್ಳಬೇಕು.ಇದು ಅನೇಕ ಜೀವಸತ್ವಗಳು ಮತ್ತು ಖನಿಜಗಳ ಸಮೃದ್ಧ ಮೂಲವಾಗಿದೆ.ಆರೋಗ್ಯಕರ ಆಹಾರವು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...