ಒಂದು ಲೋಟ ಈ ಚಹಾ ಕುಡಿದು ನೋಡಿ, ಬ್ಲಡ್ ಶುಗರ್ ತಕ್ಷಣ ನಾರ್ಮಲ್ ಆಗಿ ಬಿಡುತ್ತದೆ ! :ನೈಸರ್ಗಿಕವಾಗಿ ಸಿಗುವ ಕೆಲವು ವಸ್ತುಗಳನ್ನು ಬಳಸುವ ಮೂಲಕವೂ ನೈಸರ್ಗಿಕವಾಗಿಯೇ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. :ಮಧುಮೇಹವನ್ನು ಸಂಪೂರ್ಣವಾಗಿ ನಿರ್ನಾಮ ಮಾಡಲು ಸಾಧ್ಯವಿಲ್ಲ. ಆದರೆ ಔಷಧಿ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಇದರ ಜೊತೆಗೆ ನೈಸರ್ಗಿಕವಾಗಿ ಸಿಗುವ ಕೆಲವು ವಸ್ತುಗಳನ್ನು ಬಳಸುವ ಮೂಲಕವೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಂಪೂರ್ಣವಾಗಿ ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಸಾಧ್ಯವಾಗುತ್ತದೆ. ನೈಸರ್ಗಿಕವಾಗಿ ಸಿಗುವ ಕೆಲವು ವಸ್ತುಗಳನ್ನು ಬಳಸುವ ಮೂಲಕಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.ಅವುಗಳಲ್ಲಿ ಒಂದು ನೆಲ್ಲಿಕಾಯಿ. ನೆಲ್ಲಿಕಾಯಿಯಲ್ಲಿ ಕಂಡುಬರುವ ಪೋಷಕಾಂಶಗಳು :ನೆಲ್ಲಿಕಾಯಿಯಲ್ಲಿ ಕಬ್ಬಿಣ, ವಿಟಮಿನ್ ಸಿ,ಕಾರ್ಬೋಹೈಡ್ರೇಟ್,ರಂಜಕ, ಫೈಬರ್,ಕ್ಯಾಲ್ಸಿಯಂ ಮತ್ತು ಪ್ರೋಟೀನ್‌ಗಳಂತಹ ಅನೇಕ ಪ್ರಮುಖ ಪೋಷಕಾಂಶಗಳು ಇದರಲ್ಲಿ ಕಂಡುಬರುತ್ತವೆ.ನೆಲ್ಲಿಕಾಯಿಯನ್ನು ಆಯುರ್ವೇದದ ನಿಧಿ ಎಂದು ಕರೆಯಲಾಗುತ್ತದೆ. ಇದನ್ನೂ ಓದಿ : ನೆಲ್ಲಿಕಾಯಿ ಬಳಕೆ ಹೇಗೆ? :ಕ್ರೋಮಿಯಂ ಎಂಬ ಖನಿಜವನ್ನು ಹೊಂದಿರುತ್ತದೆ.ಇದು ಗ್ಲೂಕೋಸ್ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ. ನೆಲ್ಲಿಕಾಯಿ ಟೀ ಮಾಡುವ ವಿಧಾನ :ಮೊದಲನೆಯದಾಗಿ, ಒಂದು ಪಾತ್ರೆಯಲ್ಲಿ 2 ಕಪ್ ನೀರು ತೆಗೆದುಕೊಂಡು ಚೆನ್ನಾಗಿ ಕುದಿಸಿ. ಅದರಲ್ಲಿ ಒಂದು ಚಮಚ ಆಮ್ಲಾ ಪುಡಿ ಮತ್ತು ಪುಡಿಮಾಡಿದ ಶುಂಠಿ ಮಿಶ್ರಣ ಮಾಡಿ. ತಾಜಾ ಪುದೀನ ಎಲೆಗಳನ್ನು ಸೇರಿಸಿ ಕೆಲವು ನಿಮಿಷ ಕುದಿಸಿ.ನಂತರ ಚಹಾವನ್ನು ಫಿಲ್ಟರ್ ಮಾಡಿ ಕುಡಿಯಿರಿ. ಇದನ್ನೂ ಓದಿ : ನೆಲ್ಲಿಕಾಯಿ ಚಹಾದ ಪ್ರಯೋಜನ :ಮಧುಮೇಹಿಗಳು ನೆಲ್ಲಿಕಾಯಿ ಚಹಾವನ್ನು ಕುಡಿಯಲೇಬೇಕು :ನೀವು ಮಧುಮೇಹಿಗಳಾಗಿದ್ದರೆ ನೆಲ್ಲಿಕಾಯಿ ಚಹಾ ಬಹಳ ಪ್ರಯೋಜನಕಾರಿ. ನೆಲ್ಲಿಕಾಯಿಯನ್ನು ಹಾಗೆಯೇ ತಿನ್ನುವುದು, ಕಲ್ಲು ಉಪ್ಪಿನೊಂದಿಗೆ ಬೆರೆಸಿ ತಿನ್ನುವುದು,ರುಬ್ಬಿಕೊಂಡು ಚಟ್ನಿ ಮಾಡಿ ಸೇವಿಸುವುದು ನೆಲ್ಲಿಕಾಯಿ ಜ್ಯೂಸ್ ಮಾಡಿ ಕುಡಿಯುವುದು ಸಹ ಪ್ರಯೋಜನಕಾರಿಯಾಗಿರುತ್ತದೆ (ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ಅದನ್ನು ಖಚಿತಪಡಿಸುವುದಿಲ್ಲ.) ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...